Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಧ್ವನಿ ಎತ್ತಿದ ಐಟಿ ಕಂಪನಿ

Spread the love

ಬೆಂಗಳೂರು ಗ್ರೇಟರ್ ಬೆಂಗಳೂರಿನ ರಸ್ತೆಗುಂಡಿಗಳ  ಬಗ್ಗೆ ಪುಟ್ಟ ಪುಟ್ಟ ಮಕ್ಕಳು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಮ್ಮ ಅಪ್ಪ ಅಮ್ಮ ಟ್ಯಾಕ್ಸ್​ ಕಟ್ಟುತ್ತಿದ್ದರೂ, ರೋಡ್​ ಇಷ್ಟು ಹದಗೆಟ್ಟಿವೆ, ಯಾವಾಗ ಸರಿ ಮಾಡುತ್ತೀರಾ ಅಂತಾ ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯಗೆ ಪ್ರಶ್ನಿಸಿದ್ದಾರೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಐಟಿ ದಿಗ್ಗಜ ಮೋಹನ್ ದಾಸ್ ಪೈ (Mohandas Pai) ಕೂಡ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದು ಬೆಂಗಳೂರಿನಲ್ಲಿ ಆಡಳಿತದ ದೊಡ್ಡ ವೈಫಲ್ಯ ಆಗಿದೆ. ಹಲವು ಕಂಪನಿಗಳ ಸಿಐಒಗಳು ಹೊರಹೋಗುತ್ತಿದ್ದಾರೆ. ಬೆಂಗಳೂರಿನ ಔಟರ್​ ರಿಂಗ್​ ರಸ್ತೆಗಳಲ್ಲಿ ಪರಿಸ್ಥಿತಿ ಕೆಟ್ಟದಾಗಿದೆ. ದಯವಿಟ್ಟು ಮಧ್ಯಪ್ರವೇಶ ಮಾಡುವಂತೆ ಮನವಿ ಮಾಡಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರ್​ಗೆ​ ಟ್ಯಾಗ್​ ಮಾಡಿದ್ದಾರೆ.

ಇನ್ನು ರಸ್ತೆ ಗುಂಡಿಗಳ ವಿರುದ್ಧ ಬ್ಲಾಕ್ ಬಕ್ ಕಂಪನಿ ಕೋ ಫೌಂಡರ್ ಮತ್ತು ಸಿಇಒ ರಾಜೇಶ್ ಯಾಬಾಜಿ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಗುಂಡಿಯಿಂದ ಬೇಸತ್ತು ಕಂಪನಿ ಸ್ಥಳಾಂತರಕ್ಕೆ ಮುಂದಾಗಿದ್ದಾರೆ. ಕಳೆದ 9 ವರ್ಷಗಳಿಂದ ಬೆಳ್ಳಂದೂರು ನಮ್ಮ ಕಚೇರಿ ಮತ್ತು ಮನೆಯಾಗಿದೆ. ಆದರೆ ಈಗ ಇಲ್ಲಿ ಮುಂದುವರಿಯುವುದು ತುಂಬಾ ಕಷ್ಟ ಎಂದಿದ್ದಾರೆ.

ಒಂದು ಸೈಡ್ ಪ್ರಯಾಣ ಮಾಡಲು ಕನಿಷ್ಠ 90 ನಿಮಿಷ ಸಮಯ ಬೇಕು. ಕಳೆದ 5 ವರ್ಷದಿಂದ ಈ ಭಾಗದಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ರಸ್ತೆಗಳು ಗುಂಡಿಗಳು ಮತ್ತು ಧೂಳಿನಿಂದ ತುಂಬಿ ಹೋಗಿದೆ. ಹೀಗಾಗಿ ನಾವು ಕಂಪನಿ ಸ್ಥಳಾಂತರಕ್ಕೆ ನಿರ್ಧರಿಸಿದ್ದೇವೆ ಎಂದು ರಾಜೇಶ್ ಯಾಬಾಜಿ ಟ್ವೀಟ್​ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *