ಜಾರ್ಖಂಡ್ ಎನ್ಕೌಂಟರ್ ನಲ್ಲಿ ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಹತ್ಯೆ

ರಾಂಚಿ: ಜಾರ್ಖಂಡ್ನ ಲತೇಹಾರ್ ಜಿಲ್ಲೆಯಲ್ಲಿ ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿ ಇಬ್ಬರು ಪ್ರಮುಖ ನಕ್ಸಲ್ ನಾಯಕರ ಎನ್ಕೌಂಟರ್ ಆಗಿದೆ.
ಶನಿವಾರ ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಕಾರ್ಯಚರಣೆಯಲ್ಲಿ ನಕ್ಸಲ್ ದಂಗೆಕೋರ ಸಂಘಟನೆ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ)ನ ಇಬ್ಬರು ಕಾರ್ಯಕರ್ತರು ಹತರಾಗಿದ್ದಾರೆ. ಮೃತರಲ್ಲಿ ಪಪ್ಪು ಲೋಹ್ರಾನ ತಲೆಗೆ 10 ಲಕ್ಷ ರೂ. ಹಾಗೂ ಪ್ರಭಾತ್ ಗಂಜು ತಲೆಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.
ಸ್ಥಳದಿಂದ ಒಂದು ಐಎನ್ಎಸ್ಎಎಸ್ ರೈಫಲ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಸದ್ಯ ಕಾರ್ಯಚರಣೆ ಇನ್ನು ಮುಂದುವರಿದಿದೆ. ಇತ್ತೀಚಿನ ದಿನಗಳಲ್ಲಿ ಪೊಲೀಸರು ಜೆಜೆಎಂಪಿ ವಿರುದ್ಧ ತೀವ್ರ ಕಾರ್ಯಾಚರಣೆ ನಡೆಸುತ್ತಿರುವುದು ಗಮನಾರ್ಹ.