Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನ್ಯಾಯಮೂರ್ತಿ ವರ್ಗಾವಣೆ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ 7 ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ

Spread the love

High Court of Karnataka

ಬೆಂಗಳೂರು: ನಾಲ್ವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಲಾಗಿದೆ.

ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಹಿನ್ನಲೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಹೈಕೋರ್ಟ್ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶದಿಂದಾಗಿ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯಲ್ಲಿ ಏಪ್ರಿಲ್ 15 ಮತ್ತು 19 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸ್ಸು ಮಾಡಲಾಗಿತ್ತು. ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿಕೆ ಅನುಸಾರ, ಹೈಕೋರ್ಟ್ ಆಡಳಿತ ವ್ಯವಸ್ಥೆ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.ನ್ಯಾ. ಹೇಮಂತ್ ಚಂದನ ಗೌಡರ್ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ, ನ್ಯಾ.ಕೃಷ್ಣನ್ ನಟರಾಜನ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ, ನ್ಯಾ. ಎನ್. ಶ್ರೀನಿವಾಸ ಸಂಜಯ್ ಗೌಡ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ, ನ್ಯಾ.ಕೃಷ್ಣ ದೀಕ್ಷಿತ್ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಒಡಿಶಾ ಹೈಕೋರ್ಟ್‌ಗೆ, ನ್ಯಾ.ಪೆರುಗು ಶ್ರೀಸುಧ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ, ನ್ಯಾ.ಕೆ.ಸುರೇಂದರ್ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ಮತ್ತು ನ್ಯಾ.ಡಾ.ಕೆ.ಮನ್ಮಧ ರಾವ್ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *