Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾವೇರಿ 2.0 ಸಾಫ್ಟ್‌ವೇರ್ ಸಮಸ್ಯೆ: ತಕ್ಷಣ ಪರಿಹಾರಕ್ಕೆ ಮಂಗಳೂರು ವಕೀಲರ ಸಂಘ ಆಗ್ರಹ

Spread the love

ಮಂಗಳೂರು: ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾವೇರಿ 2.0 ಸಾಫ್ಟ್‌ವೇರ್‌ನ ಸಿಟಿಝೆನ್ ಲಾಗಿನ್ ಕಾರ್ಯನಿರ್ವಹಿಸುತ್ತಿಲ್ಲದ ಕಾರಣ ಕಳೆದ ಶನಿವಾರದಿಂದ ರಾಜ್ಯದಾದ್ಯಂತ ನೋಂದಣಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ಈ ಕುರಿತು ರಾಜ್ಯ ಸರ್ಕಾರದ ರಾಜ್ಯ ಕಂದಾಯ ಸಚಿವರು ನಿರ್ಲಕ್ಷ್ಯಪೂರ್ಣ ಹೇಳಿಕೆ ನೀಡಿದ್ದು, ಇಲಾಖೆಯು ಈ ತೊಂದರೆಯ ಮೂಲಕಾರಣವನ್ನು ಹಾಗೂ ಪರಿಹಾರದ ಮಾರ್ಗಗಳನ್ನು ಅರಿಯಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

2025ರ ಫೆಬ್ರವರಿ 1ನೇ ತಾರೀಕು ಶನಿವಾರದಿಂದ ಈ ಸಮಸ್ಯೆ ಉಲ್ಬಣಗೊಂಡಿದ್ದು, ಆ ದಿನ ರಾಜ್ಯಾದ್ಯಂತ ಯಾವುದೇ ನೋಂದಣಿ ಸಾಧ್ಯವಾಗಿರುವುದಿಲ್ಲ. 2025ರ ಫೆಬ್ರವರಿ 3ರಿಂದ ಉಪನೋಂದಣಿ ಕಚೇರಿ (SRO) ಲಾಗಿನ್ ಕಾರ್ಯನಿರ್ವಹಿಸುತ್ತಿದ್ದರೂ, ಸಿಟಿಝೆನ್ ಲಾಗಿನ್ ಇನ್ನೂ ಕಾರ್ಯನಿರ್ವಹಿಸುತ್ತಿಲ್ಲ. ಈ ತಾಂತ್ರಿಕ ತೊಂದರೆಯಿಂದ ಸಾರ್ವಜನಿಕರು, ವಕೀಲರು ಹಾಗೂ ನೋಂದಣಿ ಕಚೇರಿಗೆ ಸಂಬಂಧಪಟ್ಟ ಇತರರು ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಈ ಗಂಭೀರ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಲು ಸಂಬಂಧಿತ ಇಲಾಖೆ ಹಾಗೂ ಸರ್ಕಾರ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಮಂಗಳೂರು ವಕೀಲರ ಸಂಘ ಆಗ್ರಹಿಸುತ್ತದೆ. ಈ ಹಿನ್ನೆಲೆಯಲ್ಲಿ, ಮಂಗಳೂರು ವಕೀಲರ ಸಂಘವು ತುರ್ತು ಪತ್ರಿಕಾ ಪ್ರಕಟಣೆ ನೀಡಲು ನಿರ್ಧರಿಸಿದೆ. ಸರ್ಕಾರವು ತಕ್ಷಣ ಕ್ರಮ ಕೈಗೊಂಡು ನಾಗರಿಕ ಲಾಗಿನ್ ಪುನಃ ಚಾಲನೆ ಮಾಡುವ ಬಗ್ಗೆ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ, ವಕೀಲರ ಸಂಘವು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದೆ.


Spread the love
Share:

administrator

Leave a Reply

Your email address will not be published. Required fields are marked *