ಕುಂಭಮೇಳದ ಗಾಜುಗಣ್ಣಿನ ಮೊನಾಲಿಸಾ ಈಗ ಆಭರಣ ರಾಯಭಾರಿ!


ಕಲ್ಲಿಕೋಟೆ: ಉತ್ತರ ಪ್ರದೇಶದ ಪ್ರಯಾಗರಾಜ್ನ ಕುಂಭಮೇಳದ ಸ್ಥಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ತನ್ನ ಗಾಜುಗಣ್ಣಿನಿಂದಲೇ ಎಲ್ಲರ ಗಮನ ಸೆಳೆದಿದ್ದ ಮೊನಾಲಿಸಾಳನ್ನು ಕೇರಳದ ಚೆಮ್ಮನೂರ್ ಜ್ಯೂವೆಲ್ಲರಿ ತನ್ನ ಪ್ರಚಾರ ರಾಯಭಾರಿ ಮಾಡಿಕೊಳ್ಳಲು ನಿರ್ಧರಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂಸ್ಥೆಯ ಬಾಬಿ ಚೆಮ್ಮನೂರ್, ಮೋನಾಲಿಸಾ ಶುಕ್ರವಾರ ಕೇರಳದ ಕಲ್ಲಿಕೋಟೆಗೆ ಆಗಮಿಸಲಿದ್ದಾರೆ. ಅಲ್ಲಿ ಅವರನ್ನು ಕಂಪನಿಯ ಪ್ರಚಾರ ರಾಯಭಾರಿಯಾಗಿ ಘೋಷಿಸಲಾಗುವುದು. ಅವರಿಗೆ 15 ಲಕ್ಷ ರು. ಸಂಭಾವನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
