Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಿರಾಡಿಘಾಟ್‌ನಲ್ಲಿ ಮಳೆಗೆ ಗುಡ್ಡ ಕುಸಿತ:ರಾಷ್ಟ್ರೀಯ ಹೆದ್ದಾರಿ 75 ಅಪಾಯದ ಅಂಚಿನಲ್ಲಿ

Spread the love

ಹಾಸನ: ಹಾಸನ ಜಿಲ್ಲೆಯ ಶಿರಾಡಿಘಾಟ್ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಡೆ ಗುಡ್ಡ ಕುಸಿಯುತ್ತಿದೆ. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎಂದು ಹೇಳಲಾಗುತ್ತಿದೆ. ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಬಳಿ ರಸ್ತೆಗೆ ಅಪಾರ ಪ್ರಮಾಣದ ಮಣ್ಣು ಮತ್ತು ಬೃಹತ್ ಬಂಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನೂರಾರು ಅಡಿ ಎತ್ತರದ ಗುಡ್ಡ ಕಡಿದು ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ, ರಸ್ತೆಯ ಬದಿಯಲ್ಲಿ ಚರಂಡಿ ನಿರ್ಮಿಸದೆ ಮಳೆಗೆ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಯಾವಾಗ ಎಲ್ಲಿ ಗುಡ್ಡ ಕುಸಿದು ಬೀಳುತ್ತೋ ಎಂಬ ಆತಂಕದಲ್ಲಿ ವಾಹನ ಸವಾರರು ಇದ್ದಾರೆ.

ತಡೆಗೋಡೆ ಕುಸಿತ

ಶಿರಾಡಿಘಾಟ್​ನ ರಾಷ್ಟ್ರೀಯ ಹೆದ್ದಾರಿ 75 ಸುರಕ್ಷತೆಗೆ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ಕಟ್ಟಿದ್ದ ತಡೆಗೋಡೆ ಕುಸಿತಗೊಂಡಿದೆ. ಜುಲೈನಲ್ಲಿ ಮಳೆಗೆ ಸ್ವಲ್ಪ ಪ್ರಮಾಣದಲ್ಲಿ ತಡೆಗೋಡೆ ಕುಸಿತವಾಗಿತ್ತು. ಇದೀಗ 100 ಮೀಟರ್ ತನಕ ತಡೆಗೋಡೆ ಕುಸಿದಿದೆ. ಮತ್ತೆ ಮಳೆ ಹೆಚ್ಚಾದರೆ ರಸ್ತೆಯೇ ಕುಸಿದು ಬೀಳುವ ಆತಂಕವಿದೆ.

ಇನ್ನು, ಭಾರಿ ಮಳೆಯಿಂದ ಶಿರಾಡಿಘಾಟ್ ಭಾಗದ ಕಾಫಿ ಬೆಳೆಗಾರರು ಸಂಕಷ್ಟ ಕ್ಕೆ‌ಸಿಲುಕಿದ್ದಾರೆ. ಚತುಷ್ಪತ ರಸ್ತೆ ನಿರ್ಮಾಣಕ್ಕಾಗಿ ಕಡಿದಾಗಿ ಮಣ್ಣು ತೆಗೆದು ರಸ್ತೆ ನಿರ್ಮಿಸಿದ್ದರಿಂದ ಭೂಮಿ ಕೊಚ್ಚಿಹೋಗಿ ಕಾಫಿ ಬೆಳೆಗಾರರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗುತ್ತಿದೆ. ಪ್ರತಿಬಾರಿ ಮಳೆ ಹೆಚ್ಚಾದಾಗ ಕಾಫಿ ಗಿಡಗಳು ನಾಶವಾಗಿವೆ. ಕಾಫಿ ಗಿಡಗಳ ಜೊತೆಗೆ ಸಿಲ್ವರ್ ಮರಗಳು ಕೂಡ ಕುಸಿಯುತ್ತಿವೆ. ಸಕಲೇಶಪುರ ತಾಲೂಕಿನ ಕಪ್ಪಳ್ಳಿಯಿಂದ ಹೆಗ್ಗದ್ದೆವರೆಗೆ ಹಲವು ಕಡೆ ಕಾಫಿತೋಟ ಕುಸಿದಿದೆ. ಹತ್ತಾರು ಕಡೆ ಕಾಫಿ ತೋಟಗಳು ಕುಸಿದಿವೆ. ಒಂದೆಡೆ ರಸ್ತೆಗೆ ಮಣ್ಣು ಕುಸಿದು ಸಂಚಾರಕ್ಕೆ ತೊಂದರೆಯಾಗುತ್ತಿದ್ದರೇ, ಇನ್ನೊಂದು ಕಡೆ ಕಾಫಿ ತೋಟ ನಾಶವಾಗಿ ಬೆಳೆಗಾರರ ಪರದಾಡುವಂತಾಗಿದೆ.

ಕುಸಿದು ಬಿದ್ದ ಗೋಡೆ, ಮೇಲ್ಚಾವಣಿ

ಸಕಲೇಶಪುರ ತಾಲೂಕಿನ ಹೊಸೂರು, ಗೊದ್ದು ಗ್ರಾಮದಲ್ಲಿ ಭಾರಿ ಮಳೆಗೆ ಮನೆಯ ಗೋಡೆ, ಮೇಲ್ಚಾವಣಿ ಕುಸಿದು ಬಿದ್ದಿದೆ. ಹೊಸೂರಿನ ಗಂಗಮ್ಮ, ಗೊದ್ದು ಗ್ರಾಮದ ಸಣ್ಣಪ್ಪಗೌಡಗೆ ಸೇರಿದ ಮನೆ ಮೇಲ್ಚಾವಣಿ ಕುಸಿದಿದ್ದು, ಹೆಚ್​. ಎನ್​.ಸಣ್ಣಪ್ಪಗೌಡ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮನೆ ಹಾನಿ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದರು.


Spread the love
Share:

administrator

Leave a Reply

Your email address will not be published. Required fields are marked *