Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾವೇರಿ ತಟದ ಜನರ ಬದುಕು ಅತಂತ್ರ; 2018ರ ಪ್ರವಾಹ ಬಂದು ಹೋದರೂ ಸಂತ್ರಸ್ತರಿಗೆ ಸಿಗದ ಶಾಶ್ವತ ಸೂರು!

Spread the love

ಮಡಿಕೇರಿ: ಬೆಂಗಳೂರಿನ‌ (Bengaluru) ಕೋಗಿಲು ಬಡಾವಣೆಯಲ್ಲಿದ್ದ ಅರ್ಹ ಸಂತ್ರಸ್ತರಿಗೆ ಶೀಘ್ರದಲ್ಲೇ ವಸತಿ ಸೌಲಭ್ಯ ಕಲ್ಪಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ಆದ್ರೆ ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿ (Cauvery River) ತಟದಲ್ಲಿರುವ ಸಂತ್ರಸ್ತರ ಬದುಕು ಇಂದಿಗೂ ಅತಂತ್ರವಾಗಿಯೇ ಇದೆ.

ಹೌದು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್ ಪೋನ್ನಣ್ಣ (A.S Ponnanna) ಅವರ ಕ್ಷೇತ್ರದಲ್ಲಿ ಜನ ಈ ರೀತಿಯ ಸಂಕಷ್ಟ ಅನುಭವಿಸುತ್ತಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದಲ್ಲಿ ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ಕಾವೇರಿ ನದಿ ಉಕ್ಕಿ ಹರಿಯುವುದರಿಂದ ತಟದಲ್ಲಿರುವ ಜನ ಅಲೆದಾಡಬೇಕಾಗಿದೆ

ಕಾವೇರಿ ನದಿ ತಟದಲ್ಲಿರುವ ಜನ 2018ರಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಸಿಕ್ಕಿ ಮನೆ ಮಠ ಕಳೆದುಕೊಂಡರು. ಅಂದಿನಿಂದ ಈವರೆಗೆ ಶಾಶ್ವತ ಪರಿಹಾರಕ್ಕಾಗಿ ಹಾತೊರೆಯುತ್ತಿದ್ದಾರೆ. ಪ್ಲಾಸ್ಟಿಕ್‌ ಟಾರ್ಪಾಲ್‌, ಶೀಟ್‌ಗಳಿಂದ ತಾತ್ಕಾಲಿಕ ಶೆಡ್‌ಗಳನ್ನ ನಿರ್ಮಾಣ ಮಾಡಿಕೊಂಡು ಶಾಶ್ವತ ಸೂರಿಗಾಗಿ ಕಾಯುತ್ತಿದ್ದಾರೆ. ಆದ್ರೆ ಅದಿನ್ನೂ ಕನಸಾಗಿಯೇ ಉಳಿದಿದೆ. ಜಿಲ್ಲಾಡಳಿತವಾಗಲಿ ರಾಜಕೀಯ ಮುಖಂಡರಾಗಲಿ, ಶಾಶ್ವತ ಪರಿಹಾರ ಕಲ್ಪಿಸಿಕೊಡುವ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಜನ ಆಡಳಿತ ವರ್ಗದ ವಿರುದ್ಧ ಹಿಡಿ ಶಾಪ ಹಾಕ್ತಿದ್ದಾರೆ.

ಆದ್ರೆ ಕರಡಿಗೋಡು, ಗುಹ್ಯ, ಕೂಡುಗದ್ದೆ ಗ್ರಾಮಗಳಲ್ಲಿ ನೆಲೆಸಿರುವ ನದಿ ತಟದ ನಿವಾಸಿಗಳು ಪ್ರತಿ ವರ್ಷ ಮಳೆಗಾಲ ಬಂದಾಗೆಲ್ಲಾ ಆಶ್ರಯ ಕೇಂದ್ರಗಳಿಗೆ ಅಲೆದಾಡುವ ಪರಿಸ್ಥಿತಿ ಮಾತ್ರ ತಪ್ಪಿಲ್ಲ


Spread the love
Share:

administrator

Leave a Reply

Your email address will not be published. Required fields are marked *