Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಣ್ಣನಿಗೆ ಪ್ರೀತಿಯ ಕೊರಗು: ಪೋಷಕರ ‘ಪಕ್ಷಪಾತ’ಕ್ಕಾಗಿ ತಮ್ಮನನ್ನು ಕೊಂದ ಅಪ್ರಾಪ್ತ

Spread the love

ಭುವನೇಶ್ವರ: ತಂದೆ ಮತ್ತು ತಾಯಿಗೆ ಕಿರಿಯ ಸೋದರನ ಮೇಲೆಯೇ ಹೆಚ್ಚು ಪ್ರೀತಿ ಎಂಬ ಕಾರಣಕ್ಕೆ ಅಣ್ಣನೇ ತಮ್ಮನನ್ನು ಕೊ*ಲೆ ಮಾಡಿರುವ ಅಘಾತಕಾರಿ ಘಟನೆಯೊಂದು ಒಡಿಶಾದ ಬಲಂಗೀರ್‌ನ ತಿಥಿಲಗಢದಲ್ಲಿ ನಡೆದಿದೆ.

12 ವರ್ಷದ ತಮ್ಮನನ್ನು 17 ವರ್ಷದ ಅಪ್ರಾಪ್ತ ಕೊ*ಲೆ ಮಾಡಿದ್ದಾನೆ. ಪೋಷಕರು ಕಿರಿಯ ಮಗ ಕಾಣೆಯಾಗಿದ್ದಾನೆ ಎಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾಗಿ 45 ದಿನಗಳಾದ್ರೂ ಅಪ್ರಾಪ್ತ ಯಾವುದೇ ವಿಷಯವನ್ನು ಬಾಯಿಬಿಟ್ಟಿರಲಿಲ್ಲ. ಇದೀಗ ಸೋದರನನ್ನು ಕೊಂದಿರುವ ವಿಷಯವನ್ನು ಅಪ್ರಾಪ್ತ ಒಪ್ಪಿಕೊಂಡಿದ್ದಾರೆ.

ಇಬ್ಬರು ಮಕ್ಕಳಲ್ಲಿ ಒಬ್ಬ ಮೃತನಾದ್ರೆ, ಮತ್ತೊಬ್ಬ ಜೈಲು ಸೇರಿದ್ದನ್ನು ಕಂಡು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಪೊಲೀಸರು ಶನಿವಾರ 17 ವರ್ಷದ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಸೋದರನನ್ನು ಕೊಂದು ಯಾರಿಗೂ ತಿಳಿಯದಂತೆ ಗುಂಡಿಯೊಂದರಲ್ಲಿ ಹೂತು ಹಾಕಿದ್ದನು. ಪೋಷಕರು ಪ್ರೀತಿ ತೋರಿಸುವಲ್ಲಿ ನಮ್ಮಿಬ್ಬರ ನಡುವೆ ತಾರತಮ್ಯ ಮಾಡುತ್ತಿದ್ದರು ಎಂದು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾನೆ. ಮಕ್ಕಳ ಪೋಷಕರು ದಿನಗೂಲಿ ಕೆಲಸಗಾರರು ಎಂದು ತಿಳಿದು ಬಂದಿದೆ.

ಕಿಡ್ನ್ಯಾಪ್ ಕೇಸ್ ಎಂಬ ಆಯಾಮದಲ್ಲಿಯೇ ತನಿಖೆ ಆರಂಭ

ಪುತ್ರ ಕಾಣದಿದ್ದಾಗ ಆತಂಕಗೊಂಡ ಪೋಷಕರು ಜೂನ್ 29 ರಂದು ತಮ್ಮ 12 ವರ್ಷದ ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ ಆರಂಭದಲ್ಲಿ ಇದೊಂದು ಕಿಡ್ನ್ಯಾಪ್ ಕೇಸ್ ಎಂಬ ಆಯಾಮದಲ್ಲಿಯೇ ತನಿಖೆ ಪ್ರಾರಂಭವಾಗಿತ್ತು. ಬಾಲಕ ಕಾಣೆಯಾಗಿ 45 ದಿನಗಳಾದರೂ ಪೊಲೀಸರಿಗೆ ಯಾವುದೇ ಸುಳಿವು ಸಹ ಸಿಕ್ಕಿರಲಿಲ್ಲ. ಬಾಲಕನ ಮನೆ, ಶಾಲೆ ಭಾಗದಲ್ಲಿನ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದ್ರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಪೋಷಕರು ಕಣ್ಣೀರು ಹಾಕುತ್ತಿದ್ರೂ ಹಿರಿಯ ಮಗ ತನಗೆ ಏನು ಗೊತ್ತಿಲ್ಲ ಎಂಬಂತಿದ್ದನು.

ಪೋಷಕರಿಂದ ಪ್ರೀತಿಯಲ್ಲಿ ಪಕ್ಷಪಾತ ತೋರಿದ ಕಾರಣಕ್ಕೆ ಕೊಂದೆ ಎಂದ!

ಯಾವುದೇ ಸುಳಿವು ಸಿಗದಿದ್ದಾಗ ಪೊಲೀಸರು, ಬಾಲಕನ ಪೋಷಕರನ್ನು ಪದೇ ಪದೇ ವಿಚಾರಣೆಗೆ ಒಳಪಡಿಸುತ್ತಾರೆ. ಈ ವೇಳೆ ಹಿರಿಯ ಮಗ ಮನೆಯಲ್ಲಿ ನೆಲ ಒರೆಸುತ್ತಿದ್ದ. ಆತ ಎಂದಿಗೂ ಈ ಕೆಲಸ ಮಾಡಿರಲಿಲ್ಲ. ಇದು ಸಾಮಾನ್ಯ ವಿಷಯವಲ್ಲ ಎಂದು ತಾಯಿ ಹೇಳಿದ್ದರು. ತಾಯಿ ಈ ವಿಷಯ ಹೇಳುತ್ತಿದ್ದಂತೆ ಹಿರಿಯ ಮಗನನ್ನು ಗದರಿ ಕೇಳಿದಾಗ ಕೊ*ಲೆಯ ವಿಷಯವನ್ನು ಬಾಯಿಬಿಟ್ಟಿದ್ದಾನೆ. ಪೋಷಕರು ತಮ್ಮ ಕಿರಿಯ ಸಹೋದರನ ಬಗ್ಗೆ ಪಕ್ಷಪಾತ ತೋರಿದ ಕಾರಣ ಮತ್ತು ತಾನು ಒಂಟಿತನ ಅನುಭವಿಸಿದ ಕಾರಣ ತನ್ನ ಸಹೋದರನನ್ನು ಕೊಂದಿದ್ದೇನೆ ಎಂದು 17 ವರ್ಷದ ಬಾಲಕ ಪೊಲೀಸರಿಗೆ ವಿವರಿಸಿದ್ದಾನೆ.

ಗುಂಡಿಯಲ್ಲಿ ಹೆಣ ಹೂತಿದ್ದನು

ಕಿರಿಯ ಸಹೋದರನಿಗೆ ಇರಿದಾಗ ನೆಲದ ಮೇಲೆ ಬಿದ್ದ ರಕ್ತವನ್ನು ಒರೆಸಲು ಮನೆಯನ್ನು ಸ್ವಚ್ಛಗೊಳಿಸಿದ್ದ. ತೋಟದಿಂದ ಸಲಿಕೆ ಬಳಸಿ 12 ವರ್ಷದ ಬಾಲಕನನ್ನು ಪೋಷಕರ ಮಲಗುವ ಕೋಣೆಯ ಬಳಿಯ ಗುಂಡಿಯಲ್ಲಿ ಹೂತಿದ್ದನು. ರಾತ್ರಿ ವೇಳೆ ಯಾರ ಗಮನಕ್ಕೂ ಬಾರದಂತೆ ಶವವನ್ನು ಹೂಳಲಾಯಿತು. ಮನೆಯೊಳಗೆ ಹೂಳಲಾದ ನಂತರ, ರಾತ್ರಿ ವೇಳೆ ಶವವನ್ನು ಮನೆಯ ಹೊರಗೆ ಸ್ಥಳಾಂತರಿಸಲಾಯಿತು.

ಮಗುವನ್ನು ಅಪಹರಿಸಲಾಗಿದೆ ಎಂಬ ಅನುಮಾನದ ಮೇಲೆ ಪೊಲೀಸರು ತನಿಖೆ ಆರಂಭಿಸಿದರು. ಹತ್ತಿರದ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಕ್ಯಾನ್ ಮಾಡಿದರೂ ಅಪಹರಣದ ಅನುಮಾನವನ್ನು ದೃಢೀಕರಿಸುವ ಯಾವುದೇ ದೃಶ್ಯಾವಳಿಗಳು ಸಿಗದ ಕಾರಣ ಪೊಲೀಸರು ಮನೆಯನ್ನು ಕೇಂದ್ರೀಕರಿಸಿ ತನಿಖೆ ಆರಂಭಿಸಿದಾಗ ಕೊ*ಲೆಗಾರ ಮನೆಯಲ್ಲಿರೋದು ತನಿಖೆಯಲ್ಲಿ ತಿಳಿದು ಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *