Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಿಎಂ ಯೋಗಿಯ ಜನತಾ ದರ್ಬಾರ್​ಗೆ ವಿಷ ಸೇವಿಸಿ ಬಂದ ವ್ಯಕ್ತಿ

Spread the love

ಲಕ್ನೋ: ಒಂದೆಡೆ ದೆಹಲಿ ಸಿಎಂ ರೇಖಾ ಗುಪ್ತಾಗೆ ಕಪಾಳಮೋಕ್ಷ ಮಾಡಿರುವ ಘಟನೆ ಆಘಾತ ಸೃಷ್ಟಿಸಿದ್ದರೆ, ಮತ್ತೊಂದೆಡೆ ಲಕ್ನೋದಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಸಿಎಂ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್ನಲ್ಲಿ ಭಾಗವಹಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಗಾಜಿಯಾಬಾದ್‌ನ ವ್ಯಕ್ತಿಯೊಬ್ಬರು ವಿಷ ಸೇವಿಸಿ ಜನತಾ ದರ್ಬಾರ್‌ಗೆ ತಲುಪಿದ್ದಾರೆ. ಈ ವ್ಯಕ್ತಿಯ ಹೆಸರು ಸತ್ಬೀರ್ ಗುರ್ಜರ್ ಎಂದು ಹೇಳಲಾಗುತ್ತಿದೆ.

ಈ ವ್ಯಕ್ತಿಗೆ 65 ವರ್ಷ ವಯಸ್ಸಾಗಿದ್ದು, ಲೋನಿಯ ಸಿರೌಲಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಭದ್ರತಾ ಸಿಬ್ಬಂದಿಯ ಪ್ರಕಾರ, ಆ ವ್ಯಕ್ತಿ ನಿವೃತ್ತ ಸೈನಿಕ, ಜನತಾ ದರ್ಬಾರ್‌ನಲ್ಲಿದ್ದ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಗೆ ಸತ್ಬೀರ್ ವಿಷ ಸೇವಿಸಿ ಅಲ್ಲಿಗೆ ತಲುಪಿದ್ದಾರೆಂದು ತಿಳಿದ ತಕ್ಷಣ, ಸತ್ಬೀರ್ ಅವರನ್ನು ನಾಗರಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಸತ್ಬೀರ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ನಿವೃತ್ತ ಸೈನಿಕನನ್ನೂ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ಅಲ್ಲಿ ಹಾಜರಿದ್ದ ಜನರು ಮತ್ತು ಅಧಿಕಾರಿಗಳಿಗೆ ತಮ್ಮ ಸಮಸ್ಯೆಯಿಂದ ಹತಾಶೆಗೊಂಡು ವಿಷ ಸೇವಿಸಿರುವುದಾಗಿ ಹೇಳಿದ್ದರು.ಅವರ ಮಾತು ಕೇಳಿ ಅಲ್ಲಿದ್ದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡರು ಮತ್ತು ಅವರನ್ನು ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು.


Spread the love
Share:

administrator

Leave a Reply

Your email address will not be published. Required fields are marked *