Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಹಾ ಕುಂಭಮೇಳ: ಮಹಾಶಿವರಾತ್ರಿಯಂದು ಕೊನೆಯ ‘ಅಮೃತ ಸ್ನಾನ’

Spread the love

ಪ್ರಯಾಗ್​ರಾಜ್​​ : ವಿಶ್ವದ ಅತಿದೊಡ್ಡ ಧಾರ್ಮಿಕ ವೈಭವೋತ್ಸವ.. 144 ವರ್ಷಗಳಿಗೊಮ್ಮೆ ಜರುಗುವ ಮಹಾ ಕುಂಭಮೇಳ ಇಂದು ಅಂತ್ಯವಾಗಲಿದೆ. ಜನವರಿ 13 ರಿಂದ ಆರಂಭವಾಗಿದ್ದ ಈ ಐತಿಹಾಸಿಕ ಧಾರ್ಮಿಕ ಹಬ್ಬಕ್ಕೆ ಶಿವರಾತ್ರಿಯೊಂದಿಗೆ ಅಧಿಕೃತ ತೆರೆ ಬೀಳಲಿದೆ.
ಈವರೆಗೂ ವಿಶ್ವದ ಮೂಲೆ ಮೂಲೆಯಿಂದ 64 ಕೋಟಿಗೂ ಹೆಚ್ಚು ಭಕ್ತರು ಬಂದು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಪ್ರಪಂಚದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಜನ ಸೇರಿ ಹೊಸ ದಾಖಲೆ ನಿರ್ಮಾಣವಾಗಿದ್ದು, ಶತಮಾನದಲ್ಲೇ ಅತ್ಯಂತ ಅಪರೂಪದ ಧಾರ್ಮಿಕ ಘಟನೆಗೆ ಮಹಾ ಕುಂಭಮೇಳ ಸಾಕ್ಷಿಯಾಗಿದೆ.
ಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಮಹಾಶಿವರಾತ್ರಿಯ ಶುಭದಿನವಾದ ಇಂದು ಕೋಟ್ಯಂತರ ಭಕ್ತರು ಪುಣ್ಯಸ್ನಾನ ಮಾಡುತ್ತಿದ್ದಾರೆ. ಈ ಬಾರಿ ಮಹಾ ಶಿವರಾತ್ರಿಯ ಶುಭ ಸಮಯದಲ್ಲಿ ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಶುರು ಮಾಡಿದ್ದಾರೆ. ಮಕರ ರಾಶಿಯಲ್ಲಿ ಚಂದ್ರನ ಸಂಚಾರದೊಂದಿಗೆ ಶಿವ ಭಕ್ತರು ಪರಿಘ ಯೋಗದ ಸಮಯದಲ್ಲಿ ಸಂಗಮದಲ್ಲಿ ಶಾಹಿಸ್ನಾನ ಮಾಡುವ ಮೂಲಕ ಕೊನೆಯ ಸ್ನಾನ ಮಹೋತ್ಸವದ ಪುಣ್ಯ ಗಳಿಸುತ್ತಿದ್ದಾರೆ.
ಪಂಚಾಂಗದ ಪ್ರಕಾರ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿ ಇಂದು ಬೆಳಗ್ಗೆ 11:08ಕ್ಕೆ ಪ್ರಾರಂಭವಾಗಿ ಗುರುವಾರ ಬೆಳಗ್ಗೆ 08:54ರವರೆಗೆ ಇರಲಿದೆ. ಮಹಾಶಿವರಾತ್ರಿಯಂದು ಸ್ನಾನ ಮಾಡಲು ಶುಭ ಸಮಯ ನಾಳೆ ಬೆಳಗ್ಗೆ 9 ಗಂಟೆಯವರೆಗೆ ಇರಲಿದೆ. ಇಂದು ಮಹಾಶಿವರಾತ್ರಿಯ ದಿನದಂದು ಬ್ರಹ್ಮ ಮುಹೂರ್ತವು ಬೆಳಗ್ಗೆ 05:09ಕ್ಕೆ ಪ್ರಾರಂಭವಾಗಿದ್ದು ಸಂಜೆ 5:59ಕ್ಕೆ ಕೊನೆಗೊಳ್ಳುತ್ತದೆ. ಇಂದು ಮಹಾ ಕುಂಭಮೇಳದ ಕೊನೆಯ ಸ್ನಾನವು ಮಹಾ ಶಿವರಾತ್ರಿಯ ದಿನದಂದು ಬ್ರಹ್ಮ ಮುಹೂರ್ತದಲ್ಲಿ ಪ್ರಾರಂಭವಾಗಿದ್ದು, ಬ್ರಹ್ಮ ಮುಹೂರ್ತದ ಸಮಯದಲ್ಲಿ ಸಂಗಮ ಸ್ನಾನ ಮಾಡುವುದು ವಿಶೇಷವಾಗಿ ಫಲಪ್ರದವಾಗಿದೆ. ಈ ದಿನದಂದು ಪೂಜೆ ಮಾಡುವುದರಿಂದ ಶಿವನ ವಿಶೇಷ ಆಶೀರ್ವಾದ ಸಿಗುತ್ತದೆ ಎಂಬ ನಂಬಿಕೆ ಇದೆ.

ಅತಿದೊಡ್ಡ ಧಾರ್ಮಿಕ ಸಭೆಯ ಭಾಗವಾಗಲು ಪ್ರಯಾಗ್‌ರಾಜ್‌ಗೆ ಭಕ್ತರ ದಂಡೇ ಹರಿದು ಬರುತ್ತಿದೆ. ರೈಲುಗಳು, ವಿಮಾನಗಳು ಮತ್ತು ರಸ್ತೆ ಮಾರ್ಗಗಳು ತುಂಬಿ ತುಳುಕುತ್ತಿವೆ. ಶಿವರಾತ್ರಿಯ ದಿನದಂದು ಪವಿತ್ರ ಸ್ನಾನ ಮಾಡಲು ಭಕ್ತರ ಅನುಕೂಲಕ್ಕಾಗಿ ಮಾಡಲಾದ ವಿಶೇಷ ವ್ಯವಸ್ಥೆಗಳ ಭಾಗವಾಗಿ, ಅಧಿಕಾರಿಗಳು ಲಕ್ನೋ ಮತ್ತು ಪ್ರತಾಪ್‌ಗಢದಿಂದ ಬರುವ ಯಾತ್ರಾರ್ಥಿಗಳಿಗೆ ಫಾಫಮೌ ಘಾಟ್ ವ್ಯವಸ್ಥೆ ಮಾಡಲಾಗಿದೆ. ಆದರೆ ಅರೈಲ್ ಘಾಟ್ ಅನ್ನು ರೇವಾನ್, ಬಂದಾ, ಚಿತ್ರಕೂಟ ಮತ್ತು ಮಿರ್ಜಾಪುರದ ಜನರಿಗೆ ಕಾಯ್ದಿರಿಸಲಾಗಿದೆ. ಕೌಶಂಬಿಯಿಂದ ಬರುವ ಭಕ್ತರಿಗಾಗಿ ಸಂಗಮ್ ಘಾಟ್ ಸಿದ್ದಪಡಿಸಲಾಗಿದೆ.

ಇನ್ನು ನಿನ್ನೆ ಸಂಜೆ 4 ಗಂಟೆಯಿಂದಲೇ ತ್ರಿವೇಣಿ ಸಂಗಮಕ್ಕೆ ವಾಹನ ಸಂಚಾರ ನಿಷೇಧ ಮಾಡಲಾಗಿದ್ದು ಪಾಸ್‌ ಹೊಂದಿದ ವಾಹನಗಳಿಗೆ ಮಾತ್ರ ಪಾರ್ಕಿಂಗ್​ಗೆ ಅವಕಾಶ ನೀಡಲಾಗಿದೆ. ಹೆದ್ದಾರಿ, ಮಾರ್ಗಗಳಲ್ಲಿ 40 ಪೊಲೀಸರ ತಂಡಗಳ ನಿಯೋಜನೆ ಮಾಡಲಾಗಿದೆ. ಕಾನೂನು ಸುವ್ಯವಸ್ಥೆಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕೂಡ ನಿಯೋಜಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *