ಬೆಂಗಳೂರಿನ ಶಾಲಾ ಕಟ್ಟಡದಲ್ಲಿ ವ್ಯಕ್ತಿ ಆತ್ಮಹತ್ಯೆ: ಮಕ್ಕಳ ಎದುರೇ ಶವ ಪತ್ತೆ, ಶಾಲೆಗೆ ರಜೆ ಘೋಷಣೆ

ಬೆಂಗಳೂರು: ಶಾಲೆ ಕಟ್ಟಡದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ರಾಜೇಂದ್ರ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಅಮೃತಹಳ್ಳಿಯ ಸೆಂಟ್ ಜೇಮ್ಸ್ ಕಾಲೇಜು ಕಟ್ಟಡದಲ್ಲಿ ಈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮಿಳುನಾಡು ಮೂಲದ ರಾಜೇಂದ್ರ ಬೆಂಗಳೂರಲ್ಲಿ ವಾಸವಾಗಿದ್ದರು.
ಸೆಂಟ್ ಜೇಮ್ಸ್ ಶಾಲೆಯಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗೆ ಎಂದು ಬಂದಿದ್ದ ರಾಜೇಂದ್ರ ಕೆಲಸ ಮಾಡಿ ಶಾಲೆಯ ಕಟ್ಟಡದಲ್ಲಿ ಮಲಗುತ್ತಿದ್ದರು. ಗುರುವಾರ ರಾತ್ರಿ ನೇಣು ಬಿಗಿದುಕೊಂಡು ರಾಜೇಂದ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗ್ಗೆ ಶಾಲೆಗೆ ಮಕ್ಕಳು ಬಂದಾಗ ಮೃತದೇಹ ನೋಡಿ ಚೀರಿಕೊಂಡಿದ್ದಾರೆ. ಶಾಲೆಗೆ ರಜೆ ನೀಡಿ ಮಕ್ಕಳನ್ನು ಕಳುಹಿಸಿರುವ ಶಾಲೆ ಆಡಳಿತ ಮಂಡಳಿಯು ಪೊಲೀಸ್ ಠಾಣೆಗೆ ಮಾಹಿತಿ ನೀಡಿತ್ತು. ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.