Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಉಳ್ಳಾಲ ಠಾಣೆ ಬಳಿ ಕಾರಿನಲ್ಲಿ ಬಂದು ಕಾನ್ಸ್ಟೇಬಲ್‌ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ

Spread the love

ಉಳ್ಳಾಲ: ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಅವರಿಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ ಘಟನೆ ಉಳ್ಳಾಲ ಠಾಣೆ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೋಮೇಶ್ವರ ನಿವಾಸಿ ಸುಕೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈತ ಕಾರಿನಲ್ಲಿ ಠಾಣೆಯ ಆವರಣಕ್ಕೆ ಬಂದಿದ್ದ ಈ ವೇಳೆ ಇನ್ಸ್ಪೆಕ್ಟರ್ ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಇದರ ಬಳಿಕ ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಬಳಿ ತೆರಳಿದ್ದು, ಈ ವೇಳೆ ಆತ ಸಿಬ್ಬಂದಿ ಗೆ ಅವಾಚ್ಯ ಶಬ್ದಗಳಿಂದ ಬೈದು ಏಕವಚನದಲ್ಲಿ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಹಲ್ಲೆಗೆ ಯತ್ನಿಸಿ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ಪ್ರಕರಣದಲ್ಲಿ ದಾಖಲಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *