ನಡೆದುಕೊಂಡು ಆಸ್ಪತ್ರೆಗೆ ಬಂದ ವ್ಯಕ್ತಿಗೆ ಕೆಲ ನಿಮಿಷದಲ್ಲೇ ಬ್ರೈನ್ ಡೆಡ್

ಬೆಂಗಳೂರು :ಆಸ್ವತ್ರೆಗೆ ನಡೆದುಕೊಂಡು ಬಂದ ವ್ಯಕ್ತಿಯ ಮೆದುಳು ಕೆಲವೆ ನಿಮಿಷಗಳಲ್ಲಿ ನಿಷ್ಕ್ರಿಯವಾಗಿರುವಂತಹ ಅಚ್ಚರಿ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ನಡೆದಿದೆ.

ಹೊಸಕೋಟೆಯ ನಿವಾಸಿ ಕೋನಪ್ಪ (52) ಬ್ರೈನ್ ಡೆಡ್ ಆದ ವ್ಯಕ್ತಿ. ಇತ್ತ ಬ್ರೈನ್ ಡೆಡ್ ವಿಷಯ ತಿಳಿದ ಕುಟುಂಬಸ್ಥರು ಕಂಗಾಲಾಗಿದ್ದಾರೆ.
ನಡೆದದ್ದೇನು?
ಬೆಳಗ್ಗೆಯಿಂದ ಕೂಡ ಲವಲವಿಕೆಯಿಂದಲ್ಲೇ ಇದ್ದ ಕೋನಪ್ಪ, ಏಕಾಏಕಿ ಎದೆ ನೋವು ಅಂತ ನಡೆದುಕೊಂಡು ಸಿಲಿಕಾನ್ ಸಿಟಿ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ ವೈದ್ಯರು ಚಿಕಿತ್ಸೆ ನೀಡಲು ಮುಂದಾಗುತ್ತಿದ್ದಂತೆ ಕಾರ್ಡಿಯಾಕ್ ಅರೆಸ್ಟ್ನಿಂದ ಕುಸಿದು ಬಿದಿದ್ದಾರೆ. ತಕ್ಷಣ ಮತ್ತೊಂದು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲು ಮುಂದಾಗುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ಮೆದುಳು ನಿಷ್ಕ್ರಿಯಗೊಂಡಿದೆ.
ವ್ಯಕ್ತಿ ಮೆದುಳು ನಿಷ್ಕ್ರಿಯಗೊಂಡಾಗ ಮೆದುಳು ಹೊರತುಪಡಿಸಿ ಇಡೀ ದೇಹ ಕೆಲಸ ಮಾಡುತ್ತೆ. ಒಂದು ರೀತಿಯಲ್ಲಿ ಮನುಷ್ಯ ಬದುಕಿದ್ದು ಸತ್ತ ಸ್ಥಿತಿ. ರೋಗಿಯು ಉಸಿರಾಡದ ಕಾರಣ, ಕೃತಕ ಉಸಿರಾಟ ಅಂದರೆ ವೆಂಟಿಲೇಟರ್ನಲ್ಲಿ ಇರಿಸಲಾಗುತ್ತದೆ
