ಮಂಡ್ಯ: ವಿಸಿ ನಾಲೆಯಲ್ಲಿ ಕ್ರೇಟಾ ಕಾರ್ ಪತನ; ಪ್ರಾಣಾಪಾಯದಿಂದ ಪಾರಾದ ಚಾಲಕ ಕೃಷ್ಣ

ಮಂಡ್ಯ: ನಾಲೆಗೆ ಕಾರೊಂದು ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ (Mandya) ತಾಲೂಕಿನ ಬಿ.ಯರಹಳ್ಳಿ ಬಳಿಯ ವಿಸಿ ನಾಲೆಯಲ್ಲಿ (VC Canal) ನಡೆದಿದೆ.

ಬೆಳಗಿನ ಜಾವ 4:30ರ ಸುಮಾರಿಗೆ ಘಟನೆ ಸಂಭವಿಸಿದೆ. ಮಂಡ್ಯದ ಕಲ್ಲಹಳ್ಳಿ ನಿವಾಸಿ ಕೃಷ್ಣ ಎಂಬವರು ಕ್ರೇಟಾ ಕಾರು (Creta Car) ಚಲಾಯಿಸುತ್ತಿದ್ದರು. ಕಿರಿದಾದ ರಸ್ತೆ, ತಡೆಗೋಡೆ ಇಲ್ಲದ ಕಾರಣ ಅವಘಡ ಸಂಭವಿಸಿದೆ. ಕಾರು ನಾಲೆಗೆ ಬೀಳುತ್ತಿದ್ದಂತೆ ಚಾಲಕ ಕೃಷ್ಣ ಕಾರಿನಿಂದ ಹೊರಬಂದು ಜೀವ ಉಳಿಸಿಕೊಂಡಿದ್ದಾರೆ.
ಸದ್ಯ ನಾಲೆಯಲ್ಲಿ ಮುಳುಗಿದ್ದ ಕಾರನ್ನು ಅಗ್ನಿಶಾಮಕ ಸಿಬ್ಬಂದಿ ಮೇಲೆತ್ತಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ