Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ: ಎನ್‌ಐಎ–ಇ.ಡಿ ಆರೋಪಪಟ್ಟಿಯಲ್ಲಿ ದೇವಾಲಯದ ಹೆಸರಿನ ಗೊಂದಲ

Spread the love

ಮಂಗಳೂರು : ಮಂಗಳೂರಿನಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸದಂತೆ ಇದೀಗ ಕೇಂದ್ರ ದ ಎರಡು ತನಿಖಾ ಸಂಸ್ಥೆಗಳು ಗೊಂದಲದ ಚಾರ್ಜ್ ಶೀಟ್ ಸಲ್ಲಿಸಿದೆ. ಎನ್ ಐಎ ತನಿಖೆಯಲ್ಲಿ ಕದ್ರಿ ದೇವಸ್ಥಾನ ಎಂದು ಹೇಳಿದರೆ ಇಡಿ ತನ್ನ ಆರೋಪಪಟ್ಟಿಯಲ್ಲಿ ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎಂದು ಹೇಳಿರುವ ಮೂಲಕ ಇಡೀ ಪ್ರಕರಣ ಇದೀಗ ಗೊಂದಲಕ್ಕೆ ಕಾರಣವಾಗಿದೆ.

2022ರ ನವೆಂಬರ್ 19ರಂದು ರಿಕ್ಷಾದಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಎನ್ ಐಎ ತನಿಖೆ ವೇಳೆ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಫೋಟ ನಡೆಸುವ ಮೂಲಕ ಕೋಮುದ್ವೇಷ ಹಬ್ಬಿಸಲು ಐಸಿಸ್ ಸಂಚು ರೂಪಿಸಿತ್ತು ಎಂಬುದು ಬೆಳಕಿಗೆ ಬಂದಿತ್ತು. ಜೊತೆಗೆ ಪ್ರೆಷರ ಕುಕ್ಕರ್ ಬಾಂಬ್‌ನ ಟೈಮರ್ ಅನ್ನು 90 ನಿಮಿಷಕ್ಕೆ ಸೆಟ್ ಮಾಡುವ ಬದಲು 9 ಸೆಕೆಂಡ್‌ಗೆ ತಪ್ಪಾಗಿ ಸೆಟ್ ಮಾಡಿದ್ದ ಕಾರಣ ಅದು ದೇಗುಲದ ಬಳಿ ತೆರಳುವ ಮೊದಲೇ ರಿಕ್ಷದಲ್ಲಿಯೇ ಸ್ಫೋಟಗೊಂಡಿತ್ತು. ಈ ಕುರಿತು ಎನ್‌ಐಎ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿತ್ತು.

ಇದೇ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಇ.ಡಿ ಕೂಡಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿತ್ತು. ಪ್ರಕರಣ ಸಂಬಂಧ ಆರೋಪಿಗಳ ಖಾತೆಯಿಂದ 29176 ರು. ಜಪ್ತಿ ಮಾಡಲಾಗಿದೆ ಎಂದು ಇ.ಡಿ. ಬುಧವಾರ ಮಾಹಿತಿ ನೀಡಿತ್ತು. ಜೊತೆಗೆ ಈ ಮಾಹಿತಿಯಲ್ಲಿ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಫೋಟ ಎಂದು ನಮೂದಿಸುವ ಬದಲು ಅದು ಧರ್ಮಸ್ಥಳ ಮಂಜುನಾಥ ಎಂದು ನಮೂದಿಸಿರುವ ಕಾರಣ, ಗೊಂದಲ ಉಂಟಾಗಿದೆ.

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ), ‘ಕದ್ರಿ ಮಂಜುನಾಥ ದೇವಾಲಯ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು’ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿತ್ತು. ಆದರೆ, ಜಾರಿ ನಿರ್ದೇಶನಾಲಯವು (ಇ.ಡಿ), ‘ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು’ ಎಂದಿದೆ. ಎರಡೂ ತನಿಖಾ ಸಂಸ್ಥೆಗಳ ವಿವರಗಳಲ್ಲಿನ ವ್ಯತ್ಯಾಸ ಚರ್ಚೆಗೆ ಕಾರಣವಾಗಿದೆ.

ಜತೆಗೆ, ‘ಪ್ರೇಮರಾಜ್ ಎಂದು ಹೆಸರು ಬದಲಿಸಿದ್ದ ಶಾರಿಕ್ ಚಿಕ್ಕಬಳ್ಳಾಪುರದ ಇಶಾ ಫೌಂಡೇಷನ್, ಕನ್ಯಾಕುಮಾರಿಯ ವಿವೇಕಾನಂದ ಪ್ರತಿಮೆ, ವೆಲ್ಲೂರಿನ ದೇವಾಲಯ ಮತ್ತು ಕದ್ರಿಯ ಮಂಜುನಾಥ ದೇವಾಲಯಕ್ಕೂ ಭೇಟಿ ನೀಡಿದ್ದ ಎಂದು ವಿವರಿಸಿತ್ತು.
ಕೇಂದ್ರದ ಎರಡು ತನಿಖಾ ಸಂಸ್ಥೆಗಳು ಒಂದೇ ಪ್ರಕರಣದ ವಿಚಾರದಲ್ಲಿ ಎರಡು ಭಿನ್ನ ದೇವಾಲಯಗಳ ಹೆಸರನ್ನು ಏಕೆ ಉಲ್ಲೇಖಿಸಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಪ್ರಶ್ನಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *