Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹ*ತ್ಯೆ; ಐದನೇ ಮಹಡಿಯಿಂದ ಜಿಗಿದು ಪ್ರಾಣಾರ್ಪಣೆ!

Spread the love

ಮಂಗಳೂರು : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ತಾನು ವಾಸವಿದ್ದ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ತನ್ನ ಪೋಷಕರೊಂದಿಗೆ ಸುಭಾಷಿತ ನಗರದ ವಸತಿ ಸಮುಚ್ಚಯವೊಂದರ ಎರಡನೇ ಅಂತಸ್ತಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಪೊಲೀಸ್ ಮೂಲಗಳ ಪ್ರಕಾರ, ಮಹಾಲಕ್ಷ್ಮೀ ಅವರು ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಂಗಳವಾರ ತಂದೆ-ತಾಯಿಯ ಜೊತೆ ಸೇರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಮನೆಗೆ ಮರಳಿದ್ದರು. ದೇವಸ್ಥಾನದಿಂದ ವಾಪಸ್ ಬಂದ ಕೆಲವೇ ಸಮಯದ ಬಳಿಕ, ಪೋಷಕರು ಮನೆಯಲ್ಲಿದ್ದಾಗಲೇ ಮಹಾಲಕ್ಷ್ಮೀ ಏಕಾಏಕಿ ಅಪಾರ್ಟ್‌ಮೆಂಟ್‌ನ 5ನೇ ಮಹಡಿಗೆ ಹೋಗಿ ಅಲ್ಲಿಂದ ಕೆಳಗೆ ಜಿಗಿದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರೂ, ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಭವಿಸಿದ ತಕ್ಷಣ ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪೋಷಕರು ನೀಡಿದ ಅಧಿಕೃತ ದೂರಿನ ಮೇರೆಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *