Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು: ಸೆಮಿನಾರ್ ತಪ್ಪಿಸಲು ವಿದ್ಯಾರ್ಥಿನಿಯ ಬಾಂಬ್ ಬೆದರಿಕೆ

Spread the love

ಮಂಗಳೂರು: ಸೆಮಿನಾರ್​ ತಪ್ಪಿಸಲು ಓರ್ವ ವಿದ್ಯಾರ್ಥಿನಿ ತಾನು ವ್ಯಾಸಂಗ ಮಾಡುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್​ ಇದೆ ಎಂದು ಹುಸಿ ಬೆದರಿಕೆ ಕರೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ವಿದ್ಯಾರ್ಥಿನಿ ಡಾ.ಚಲಸಾನಿ ಮೋನಿಕಾ ಚೌಧರಿಯನ್ನು ಬಂಧಿಸಿದ್ದಾರೆ. ಡಾ.ಚಲಸಾನಿ ಮೋನಿಕಾ ಚೌಧರಿ ಜೂ.4 ರಂದು ಸೆಮಿನಾರ್ ಕೊಡಬೇಕಿತ್ತು.

ಆದರೆ, ಈ ಸಮಿನಾರ್​ನಿಂದ ತಪ್ಪಿಸಿಕೊಳ್ಳಲು ಮೋನಿಕಾ ಜೂನ್ 4ರ ಬೆಳಗ್ಗೆ 8.15ಕ್ಕೆ ತಾನು ಓದುತ್ತಿರುವ ಕಣಚೂರು ಮೆಡಿಕಲ್ ಕಾಲೇಜಿನ ಹೆರಿಗೆ ವಾರ್ಡ್​ನ ಸ್ಥಿರ ದೂರವಾಣಿಗೆ ಕರೆ ಮಾಡಿ, “ಬೆಳಗ್ಗೆ 11ಕ್ಕೆ ಕಣಚೂರು ಆಸ್ಪತ್ರೆ ಸ್ಫೋಟಿಸುವುದಾಗಿ” ಬೆದರಿಕೆ ಹಾಕಿದ್ದಾರೆ.

ನಂತರ, ಮೋನಿಕಾ ಚೌಧರಿಯೇ ನಮ್ಮ ಕಾಲೇಜಿಗೆ ಬಾಂಬ್​ ಬೆದರಿಕೆ ಕರೆ ಬಂದಿದೆ ಎಂದು ಉಳ್ಳಾಲ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ. ತನಿಖೆ ವೇಳೆ ತಾಂತ್ರಿಕ ವಿಶ್ಲೇಷಣೆ ನಡೆಸಿದಾಗ, ದೂರು ನೀಡಿದ ವಿದ್ಯಾರ್ಥಿನಿ ಡಾ.ಚಲಸಾನಿ ಮೋನಿಕಾ ಚೌಧರಿಯೇ ಬಾಂಬ್​ ಬೆದರಿಕೆ ಹಾಕಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರು ಡಾ.ಚಲಸಾನಿ ಮೋನಿಕಾ ಚೌಧರಿಯನ್ನು ಬಂಧಿಸಿದ್ದಾರೆ. ಮೋನಿಕಾ ಚೌಧರಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ಹುಸಿ ಬಾಂಬ್​ ಬೆದರಿಕೆ ಕರೆ ಮಾಡಿರುವ ಹಿಂದಿನ ಕಾರಣ ಗೊತ್ತಾಗಿದೆ.


Spread the love
Share:

administrator

Leave a Reply

Your email address will not be published. Required fields are marked *