ಮಂಗಳೂರು: ಕೂಳೂರು ಬಳಿ ಭೀಕರ ರಸ್ತೆ ಅಪಘಾತ; ಸ್ಕೂಟರ್ ಸವಾರ ಸ್ಥಳದಲ್ಲೇ ಸಾ*ವು!

ಮಂಗಳೂರು : ನಗರದ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಕೂಳೂರು ಬಳಿಯ ವಿ.ಆರ್.ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರನೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಂಟೈನರ್ ಲಾರಿಯೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದು ಸವಾರನ ಮೇಲೆಯೇ ಹರಿದಿದ್ದರಿಂದ ಈ ದಾರುಣ ಘಟನೆ ಸಂಭವಿಸಿದೆ.

ಮೃತರನ್ನು ಕೊಟ್ಟಾರ ನಿವಾಸಿ ಸದಾನಂದ ಶೆಟ್ಟಿಗಾರ್ (46) ಎಂದು ಗುರುತಿಸಲಾಗಿದೆ. ಹಳೆಯಂಗಡಿ ಬಳಿಯ ತೋಕೂರು ನಿವಾಸಿ ಸದಾಶಿವ ಶೆಟ್ಟಿಗಾರ್(46) ಮೃತರು. ಇವರು ವೃತ್ತಿಯಲ್ಲಿ ಇನ್ಸೂರೆನ್ಸ್ ಏಜಂಟ್ ಆಗಿದ್ದು ಮಂಗಳೂರಿಗೆ ಕಾರ್ಯ ನಿಮಿತ್ತ ಬಂದು ಸಂಜೆ ವೇಳೆಗೆ ಮನೆಯತ್ತ ತೆರಳುತ್ತಿದ್ದರು. ಭಾರೀ ಮಳೆಯ ನಡುವೆ ಟ್ರಾಫಿಕ್ ದಟ್ಟಣೆ ಇರುವಾಗಲೇ ಕುಳೂರು ವಿಆರ್ ಎಲ್ ಕಚೇರಿ ಮುಂಭಾಗದಲ್ಲಿ ಅಪಘಾತ ನಡೆದಿದೆ.