Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು ಅಟ್ಟಹಾಸ: ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬೃಹತ್ ಸಂಚು, ಶಾಕ್ ನೀಡಿದ ವಿಚಾರಣೆ ವಿವರಗಳು!

Spread the love

ಮಂಗಳೂರು:ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಬಾರಿ ಸಂಚು ನಡೆದಿರುವುದು ಬಯಲಾಗಿದೆ. ಕಾಂಟ್ರಾಕ್ಟ್ ಕಿಲ್ಲರ್ಸ್ ಬಳಸಿ ಈ ದಾಳಿ ನಡೆಸಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಇದೀಗ ಪೊಲೀಸರು ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಅನ್ನೋ ಮಾಹಿತಿ ಬಯಲಾಗಿದೆ.

ಪೊಲೀಸರು ವಶಕ್ಕೆ ಪಡೆದಿರುವ 8 ಆರೋಪಿಗಳ ಪೈಕಿ ಇಬ್ಬರು ಹಿಂದೂ ಯುವಕರು ಎಂದು ಹೇಳಲಾಗುತ್ತಿದೆ. ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದೀಗ 8 ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಇಂದು ಅಧಿಕೃತ ಘೋಷಣೆ ಸಾಧ್ಯತೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಆರೋಪಿಗಳ ತಂಡ ಅಡ್ಡಗಟ್ಟಿ ಮಂಗಳೂರಿನ ಬಜ್ಪೆ ಸಮೀಪ ಹ*ತ್ಯೆ ಮಾಡಿತ್ತು. ಮೇ.01ರಂದು ಈ ಘಟನೆ ನೆಡೆದಿತ್ತು. ನಿನ್ನೆ ಸುಹಾಶ್ ಶೆಟ್ಟಿ ಅಂತ್ಯಸಂಸ್ಕಾರ ಕಾರಿಂಜದ ಸ್ವಗೃಹದಲ್ಲಿ ನಡೆದಿದೆ. ಈ ಘಟನೆಯಿಂದ ರಾಜ್ಯಾದ್ಯಂತ ಆಕ್ರೋಶಗಳು ಹೆಚ್ಚಾಗುತ್ತಿದೆ. ಇತ್ತ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, 8 ಆರೋಪಿಗಳ ವಿಚಾರಣೆ ತೀವ್ರಗೊಳಿಸಿದ್ದಾರೆ. ವಶಕ್ಕೆ ಪಡೆದಿರುವ ಕೆಲ ಆರೋಪಿಗಳು ದಕ್ಷಿಣ ಕನ್ನಡದಲ್ಲೇ ಅವಿತು ಕುಳಿತಿದ್ದರು. ಆರೋಪಿಗಳ ವಶಕ್ಕೆ ಪಡೆದಿರುವ ಕುರಿತು ಇಂದು ಮಂಗಳೂರು ಕಮಿಷನರ್ ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.

ಚಿಕ್ಕಮಗಳೂರಿನಲ್ಲಿ ಇಬ್ಬರ ಬಂಧನ?
ಹಿಂದೂ ಕಾರ್ಯಕರ್ತನ ಮೇಲಿನ ದಾಳಿಯಲ್ಲಿ ಹಿಂದೂ ಯುವಕರನ್ನೇ ಬಳಸಲಾಗಿದೆ ಅನ್ನೋ ಸ್ಫೋಟಕ ಮಾಹಿತಿ ಬಯಲಾಗಿದೆ. ಚಿಕ್ಕಮಗಳೂರಿನ ಕಳಸ ಮೂಲದ ಇಬ್ಬರು ಹಿಂದೂ ಯವಕರು ಮಂಗಳೂರಿನ ನಟೋರಿಯಸ್ ಸಫ್ವಾನ್ ಗ್ಯಾಂಗ್ ಜೊತೆ ಸೇರಿಕೊಂಡಿದ್ದರು. ಸಫ್ಬಾನ್ ಗ್ಯಾಂಗ್ ಜೊತೆಗಿದ್ದ ಇಬ್ಬರು ಹಿಂದೂ ಯುವಕರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕಾನೂನು ಸುವ್ಯವಸ್ಥೆಗೆ ಮಂಗಳೂರಿನಲ್ಲಿ ಗೃಹ ಸಚಿವರ ಸಭೆ
ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದಲ್ಲಿ ಪರಿಸ್ಥಿತಿ ಉದ್ವಿಘ್ನವಾಗಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದೂ ಸಂಘಟನೆಗಳು ಆಕ್ರೋಶ ಹೊರಹಾಕಿದೆ. ವಿಶ್ವಹಿಂದೂ ಪರಿಷತ್ ಹಾಗೂ ಇತರ ಸಂಘಟನೆಗಳು ನಿನ್ನೆ(ಮೇ.02) ರಂದು ಕರೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಯಶಸ್ವಿಯಾಗಿದೆ. ಕೆಲವೆಡೆ ಬಸ್‌ಗೆ ಕಲ್ಲು ತೂರಿದ ಘಟನೆಗಳು ನಡೆದಿದೆ. ದಕ್ಷಿಣ ಕನ್ನಡದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಈ ಹಿನ್ನಲೆಯಲ್ಲಿ ಇಂದು ಗೃಹ ಸಚಿವ ಪರಮೇಶ್ವರ್ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ಮಂಗಳೂರು ಕಮಿಷನರ್ ಸೇರಿದಂತೆ ಅಧಿಕಾರಿಗಳ ಜೊತೆ ಕಾನೂನು ಸುವ್ಯವಸ್ಥೆ ಕಾಪಾಡಲು ಸಭೆ ನಡೆಸಲಿದ್ದಾರೆ.

ಸುಹಾಸ್ ಶೆಟ್ಟಿ ಪ್ರಕರಣವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಕಾಂಗ್ರೆಸ್ ಒಲೈಕೆ ರಾಜಕಾರಣದಿಂದ ಈ ದಾಳಿಯಾಗಿದೆ ಎಂದು ಆರೋಪಿಸಿದೆ. ವಿಪಕ್ಷ ನಾಯಕ ಆರ್ ಆಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಿನ್ನೆ(ಮೇ.02) ಸುಹಾಶ್ ಶೆಟ್ಟಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಜೊತೆಗೆ ಸ್ಥಳೀಯ ಬಿಜಿಪಿ ನಾಯಕರು ಪಾಲ್ಗೊಂಡಿದ್ದರು. ಈ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ. ಆರೋಪಿಗಳ ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.

ಮನೆಯಲ್ಲಿ ಮಡಗಟ್ಟಿದ ದುಃಖ
ಸುಹಾಸ್ ಶೆಟ್ಟಿ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕುಟುಂಬಕ್ಕೆ ಆಧಾರವಾಗಿದ್ದ ಸುಹಾಶ್ ಶೆಟ್ಟಿ ಇದೀಗ ಅನಾರೋಗ್ಯ ಪೀಡಿತ ಪೋಷಕರನ್ನು ಅನಾಥವಾಗಿ ಬಿಟ್ಟು ಹೋಗಿದ್ದಾನೆ ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಹಿಂದುತ್ವಕ್ಕಾಗಿ ಹೋರಾಡಿದ, ಹಿಂದುತ್ವವನ್ನೇ ಉಸಿರಾಗಿಸಿದ ಮಗನ ಜೀವ ಹೋಗಿದೆ ಎಂದು ತಾಯಿ ಸುಲೋಚನಾ ಕಣ್ಣೀರಿಟ್ಟಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *