Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಂಚನೆ ಪ್ರಕರಣ: ಮಲಯಾಳಂ ಸ್ಟಾರ್ ನಟ ಸೌಬಿನ್‌ಗೆ ಸೈಮಾ ಅವಾರ್ಡ್ಸ್‌ಗಾಗಿ ದುಬೈ ಪ್ರವಾಸಕ್ಕೆ ನ್ಯಾಯಾಲಯದಿಂದ ತಡೆ

Spread the love

ಇತ್ತೀಚೆಗೆ ಬಿಡುಗಡೆ ಆದ ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾನಲ್ಲಿ ಹಲವಾರು ಸ್ಟಾರ್ ನಟರು ಅತಿಥಿ ಪಾತ್ರಗಳಲ್ಲಿ ನಟಿಸಿದ್ದರು. ಆದರೆ ಎಲ್ಲರಿಗಿಂತಲೂ ಹೆಚ್ಚು ಶೈನ್ ಆಗಿದ್ದು ಮಾತ್ರ ಮಲಯಾಳಂ ನಟ ಸೌಬಿನ್. ಅತ್ಯುತ್ತಮ ನಟರಾಗಿರುವ ಸೌಬಿನ್, ಮಲಯಾಳಂನ ಸ್ಟಾರ್ ನಟರುಗಳಲ್ಲಿ ಒಬ್ಬರು. ನಟರಾಗಿರುವ ಜೊತೆಗೆ ನಿರ್ಮಾಪಕರೂ ಹೌದು. ಆದರೆ ಈಗ ವಂಚನೆ ಪ್ರಕರಣವೊಂದರಿಂದಾಗಿ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ.

ಸೌಬಿನ್ ನಟಿಸಿ ನಿರ್ಮಾಣ ಮಾಡಿದ್ದ ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಯನ್ನೇ ಬರೆದಿತ್ತು. 2024 ರ ಫೆಬ್ರವರಿಯಲ್ಲಿ ಬಿಡುಗಡೆ ಆಗಿದ್ದ ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾಕ್ಕೆ ಕೇವಲ 20 ಕೋಟಿ ಖರ್ಚು ಮಾಡಲಾಗಿತ್ತು. ಆದರೆ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 200 ಕೋಟಿಗೂ ಹೆಚ್ಚಿನ ಹಣವನ್ನು ಗಳಿಕೆ ಮಾಡಿತು. ಸಿನಿಮಾಕ್ಕೆ ಸೌಬಿನ್ ಶಾಹಿರ್, ಬಾಬು ಶಾಹಿರ್ ಮತ್ತು ಶಾನ್ ಆಂಟೊನಿ ಬಂಡವಾಳ ಹೂಡಿದ್ದು, ಭಾರಿ ಮೊತ್ತದ ಲಾಭವನ್ನೇ ಸಿನಿಮಾನಿಂದ ಗಳಿಕೆ ಮಾಡಿದರು.

ಆದರೆ ಯುಎಇ ಮೂಲದ ಹೂಡಿಕೆದಾರರೊಬ್ಬರು ಸೌಬಿನ್ ಹಾಗೂ ಇತರೆ ನಿರ್ಮಾಪಕರುಗಳ ವಿರುದ್ಧ ವಂಚನೆ, ನಂಬಿಕೆ ದ್ರೋಹದ ಪ್ರಕರಣ ದಾಖಲು ಮಾಡಿದರು. ಕಳೆದ ವರ್ಷವೇ ದೂರು ದಾಖಲಾಗಿದ್ದು ಪ್ರಕರಣ ಈಗ ಸೌಬಿನ್ ವಿರುದ್ಧ ತಿರುಗುವ ಸೂಚನೆಗಳು ದೊರೆತಿವೆ.

ಸೆಪ್ಟೆಂಬರ್ 5 ರಂದು ದುಬೈನಲ್ಲಿ ನಡೆಯಲಿರುವ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ಪ್ರಯಾಣಿಸಲು ಸೌಬಿನ್ ಮುಂದಾಗಿದ್ದರು. ಆದರೆ ಅವರಿಗೆ ವೀಸಾ ಸಮಸ್ಯೆ ಎದುರಾಯ್ತು. ಸೌಬಿನ್ ವಿರುದ್ಧ ಹಣಕಾಸು ವಂಚನೆ ಪ್ರಕರಣ ಇದ್ದಿದ್ದರಿಂದ ದುಬೈಗೆ ಪ್ರವೇಶ ನಿರಾಕರಿಸಲಾಯ್ತು. ಕೂಡಲೇ ಸೌಬಿನ್ ಮ್ಯಾನೇಜರ್ ಎರ್ನಾಕುಲಂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿ, ವಿದೇಶ ಪ್ರಯಾಣಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿದರು.

ಸೌಬಿನ್, ಸೈಮಾಗೆ ಹೋಗಿ ಪ್ರಶಸ್ತಿ ಪಡೆಯುವುದು ಮಲಯಾಳಂ ಚಿತ್ರರಂಗಕ್ಕೆ ಗೌರವಕಾರಕ ವಿಚಾರ. ಸೌಬಿನ್​ ಅವರ ಪ್ರತಿಭೆಗೆ ನೀಡುತ್ತಿರುವ ಗೌರವ ಇದಾಗಿದ್ದು, ಅದನ್ನು ಅವರು ಸ್ವೀಕರಿಸಬೇಕಿದೆ, ಕಾರ್ಯಕ್ರಮ ಮುಗಿದ ಕೂಡಲೇ ಅವರು ಮರಳಿ ಬರಲಿದ್ದಾರೆ ಎಂದು ಸೌಬಿನ್ ಪರ ವಕೀಲರು ವಾದ ಮಾಡಿದರು. ವಾದ ಆಲಿಸಿದ ನ್ಯಾಯಾಲವು ಸೌಬಿನ್ ವಿದೇಶ ಪ್ರಯಾಣ ಮಾಡಬಾರದೆಂದು ನಿಬಂಧನೆ ಹೇರಿದೆ.

ಏನಿದು ಪ್ರಕರಣ?

‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ನಿರ್ಮಾಣಕ್ಕೆ ಸೌಬಿನ್ ಹಾಗೂ ಇನ್ನಿಬ್ಬರು ನಿರ್ಮಾಪಕರು ಕೇರಳದ ಅರೂರಿನ ಸಿರಾಜ್ ವಲಯತ್ತಾರ ಹಮೀದ್ ಎಂಬುವರ ಬಳಿ ಏಳು ಕೋಟಿ ರೂಪಾಯಿ ಹಣ ಪಡೆದಿದ್ದರಂತೆ. ಸಿನಿಮಾನಲ್ಲಿ ಬರುವ ಆದಾಯದಲ್ಲಿ 40% ಪಾಲನ್ನು ಕೊಡುವುದಾಗಿ ಒಪ್ಪಂದ ಮಾಡಿಕೊಂಡಿದ್ದರಂತೆ. ಆದರೆ ಸಿನಿಮಾ ಬ್ಲಾಕ್ ಬಸ್ಟರ್ ಆದ ಬಳಿಕ ಒಪ್ಪಂದದಂತೆ ಲಾಭವನ್ನು ಹಂಚಿಕೆ ಮಾಡಲಿಲ್ಲವಂತೆ ಸೌಬಿನ್ ಹಾಗೂ ಇತರೆ ನಿರ್ಮಾಪಕರು. ಹೀಗಾಗಿ ದೂರು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಜುಲೈ ತಿಂಗಳಲ್ಲಿ ಸೌಬಿನ್ ಅನ್ನು ಪೊಲೀಸರು ಬಂಧಿಸಿ ಅದೇ ದಿನ ಜಾಮೀನಿನ ಮೇಲೆ ಬಿಡುಗಡೆ ಸಹ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *