ಸೋಲಾಪುರ ಜವಳಿ ಕಾರ್ಖಾನೆಯಲ್ಲಿ ಭಾರಿ ಬೆಂಕಿ – ಕಾರ್ಖಾನೆ ಮಾಲೀಕ ಸೇರಿದಂತೆ ಎಂಟು ಮಂದಿ ದುರ್ಮರಣ

ಮುಂಬೈ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಭಾನುವಾರ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಕಾರ್ಖಾನೆ ಮಾಲೀಕ, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸೋಲಾಪುರ ಎಂಐಡಿಸಿಯ ಅಕ್ಕಲ್ಕೋಟ್ ರಸ್ತೆಯಲ್ಲಿರುವ ಸೆಂಟ್ರಲ್ ಜವಳಿ ಮಿಲ್ಸ್ನಲ್ಲಿ ಇಂದು ಬೆಳಗಿನ ಜಾವ 3:45 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.
