Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಾದ: ಶಿಕ್ಷಣಕ್ಕೆ ಆಪ್​ ಸರ್ಕಾರದ ಕೊಡುಗೆ ವಿರುದ್ದ ವಾಗ್ದಾಳಿ.

Spread the love

ದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶಾಲೆಗಳಲ್ಲಿನ ಉತ್ತೀರ್ಣದ ಮಾನದಂಡಗಳ ಬಗ್ಗೆ ದೆಹಲಿಯ ಮಕ್ಕಳ ಜೊತೆ ಅವರು ಚರ್ಚಿಸಿದರು. ಈ ವೇಳೆ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು.

ಈ ಸರ್ಕಾರ ಯಾರು ಪರೀಕ್ಷೆಯಲ್ಲಿ ಪಾಸ್ ಆಗುತ್ತಾರೆಂಬ ಖಾತರಿ ಇರುತ್ತದೆಯೋ ಅಂತಹ ವಿದ್ಯಾರ್ಥಿಗಳನ್ನು ಮಾತ್ರ 9ನೇ ತರಗತಿಯ ನಂತರ ಶಿಕ್ಷಣವನ್ನು ಮುಂದುವರಿಸಲು ಬಿಡುತ್ತಿತ್ತು ಎಂದು ನಾನು ಕೇಳಿದ್ದೇನೆ. ಸರ್ಕಾರದ ಮೇಲೆ ಕೆಟ್ಟ ಹೆಸರು ಬರಬಾರದೆಂದು ಈ ರೀತಿ ಮಾಡಲಾಗುತ್ತಿದೆ ಎಂದು ನನಗೆ ಮಾಹಿತಿ ಸಿಕ್ಕಿದೆ. ಇದರಿಂದ ಮಕ್ಕಳ ಶಿಕ್ಷಣದ ಮೇಲೆ ಬಹಳ ಗಂಭೀರ ಪರಿಣಾಮ ಬೀರಿದೆ ಎಂದು ಮೋದಿ ಟೀಕಿಸಿದ್ದಾರೆ.

ಇದೇ ಫೆಬ್ರವರಿ 05ರಂದು ರಾಷ್ಟ್ರ ರಾಜಧಾನಿಗೆ ಚುನಾವಣೆ ನಡೆಯಲಿದ್ದು. ಶತಾಯ ಗತಾಯ ಡೆಲ್ಲಿ ಗದ್ದುಗೆಯನ್ನು ಹಿಡಿಯಲು ಬಿಜೆಪಿ ಯತ್ನಿಸುತ್ತಿದೆ. ಕಳೆದ 27 ವರ್ಷಗಳಿಂದ ರಾಷ್ಟ್ರ ರಾಜಧಾನಿಯ ಮೇಲಿನ ಹಿಡಿತವನ್ನು ಕಳೆದುಕೊಂಡಿರುವ ಬಿಜೆಪಿ ಈ ಬಾರಿ ಕೇಜ್ರಿವಾಲ್​ ನೇತೃತ್ವದ ಸರ್ಕಾರವನ್ನು ಬೀಳಿಸಿ ಅಧಿಕಾರ ಪಡೆಯಲು ಪ್ರಯತ್ನಿಸುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *