Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಫೈನಾನ್ಸ್ ಸಾಲಬಾಧೆಗೆ ಮನನೊಂದು ತಾಯಿ-ಮಗಳ ಆತ್ಮಹತ್ಯೆ

Spread the love

ದಾವಣಗೆರೆ: ರೈಲಿಗೆ ತಲೆ ಕೊಟ್ಟು ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತುಂಗಭದ್ರಾ ನದಿ ಸೇತುವೆಯ ಮೇಲೆ ನಡೆದಿದೆ

ರೈಲು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆಯರಿಬ್ಬರ ರುಂಡ, ಮುಂಡ ಪ್ರತ್ಯೇಕವಾಗಿದ್ದು, ಅಂಗಾಂಗಗಳು ರಕ್ತಸಿಕ್ತವಾಗಿ ಛಿದ್ರವಾಗಿ ಬಿದ್ದಿವೆ.

ಹರಿಹರ ತಾಲೂಕು ಗಂಗನರಸಿ ಗ್ರಾಮದ ಸುವರ್ಣಮ್ಮ ಮತ್ತು ಅವರ ಪುತ್ರಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಫೈನಾನ್ಸ್ ಸಾಲ ಕಟ್ಟಲಾಗದೆ ರೈಲಿಗೆ ತಲೆ ಕೊಟ್ಟು ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕೆಲವು ವರ್ಷಗಳ ಹಿಂದೆ ಸುವರ್ಣಮ್ಮ ಅವರ ಪತಿ ನಿಧನರಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಿದ್ದು, ಮತ್ತೊಬ್ಬ ಪುತ್ರಿ ದಿವ್ಯಾಂಗರಾಗಿದ್ದರು. ಸಾಲದ ಕಿರುಕುಳದಿಂದ ದುಡುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *