Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಉಡುಪಿ:ಊಟದ ನಂತರ ಕೈ ತೊಳೆಯಲು ಹೋದ ತಾಯಿಗೆ ಶಾಕ್: 4 ವರ್ಷದ ಮಗು ಕೆರೆಯಲ್ಲಿ ಸತ್ತ ಸ್ಥಿತಿಯಲ್ಲಿ ಪತ್ತೆ

Spread the love

ಉಡುಪಿ :ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಪುಟ್ಟ ಮಗುವೊಂದು ಆಕಸ್ಮಿಕವಾಗಿ ದೇವಾಳಯದ ಕೆರೆಯಲ್ಲಿ ಮುಳುಗಿ ಸಾವನಪ್ಪಿ ಘಟನೆ ನಂದಿಕೂರಿನಲ್ಲಿ ಮೇ 11ರಂದು ಸಂಭವಿಸಿದೆ.
ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ (38) ಮತ್ತು ಸೌಮ್ಯ ಅವರ ಪುತ್ರ ವಾಸುದೇವ (4) ಎಂದು ಗುರುತಿಸಲಾಗಿದೆ.

ಸತ್ಯನಾರಾಯಣ ಅವರು ನೀಡಿದ ದೂರಿನ ಪ್ರಕಾರ, ಕುಟುಂಬವು ನಂದಿಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿವಾಹಕ್ಕೆ ಹಾಜರಾಗಿತ್ತು. ಮಧ್ಯಾಹ್ನ 2:00 ಗಂಟೆ ಸುಮಾರಿಗೆ ಸೌಮ್ಯ ಅವರು ತಮ್ಮ ಕಿರಿಯ ಮಗುವಿಗೆ ಸಭಾಂಗಣದ ಒಳಗೆ ಊಟ ಮಾಡಿಸುತ್ತಿದ್ದರು. ವಾಸುದೇವ ಕೂಡ ತಾಯಿಯ ಸಮೀಪವಿದ್ದನು.

ಮಗುವಿಗೆ ಊಟ ಮಾಡಿಸಿದ ನಂತರ, ಸೌಮ್ಯ ಅವರು ಕೈ ತೊಳೆಯಲು ಹೊರಗೆ ಹೋದರು ಎನ್ನಲಾಗಿದೆ. ಹಿಂತಿರುಗಿದಾಗ, ವಾಸುದೇವ ಕಾಣೆಯಾಗಿರುವುದು ಅವರ ಗಮನಕ್ಕೆ ಬಂದಿತು. ತಕ್ಷಣ ಅವರು ಸಭಾಂಗಣದಲ್ಲಿದ್ದ ಕುಟುಂಬ ಸದಸ್ಯರು ಮತ್ತು ಸಂಬಂಧಿಕರಿಗೆ ತಿಳಿಸಿ ಆವರಣದಲ್ಲಿ ಹುಡುಕಾಟ ನಡೆಸಿದ್ದಾರೆ. ಎಷ್ಟು ಹುಡುಕಿದರೂ, ಮಗು ಸಭಾಂಗಣದ ಒಳಗೆ ಪತ್ತೆಯಾಗಲಿಲ್ಲ. ಸುಮಾರು 2:15 ರ ಸುಮಾರಿಗೆ, ವಾಸುದೇವನ ದೇಹವು ಸಮಾರಂಭದ ಸ್ಥಳದ ಪಕ್ಕದಲ್ಲಿದ್ದ ದೇವಾಲಯದ ಕೆರೆಯಲ್ಲಿ ತೇಲುತ್ತಿರುವುದು ಕಂಡುಬದಿತು. ಅಲ್ಲಿದ್ದವರು ತಕ್ಷಣ ಮಗುವನ್ನು ಹೊರತೆಗೆದು ಪ್ರಥಮ  ಚಿಕಿತ್ಸೆ ನೀಡಲು ಪ್ರಯತ್ನಿಸಿದರು. ಆದರೆ ಮಗು ಚಿಕಿತ್ಸೆಗೆ ಸ್ಪಂದಿಸಿರಲಿಲ್ಲಲ್ಲೀ ವಿಷಯವನ್ನು ಸೌಮ್ಯ ಅವರು ತಮ್ಮ ಪತಿಗೆ ತಿಳಿಸಿದ್ದು, ಮಗುವನ್ನು ತಕ್ಷಣ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಬಳಿಕ ಕುಟುಂಬವು ಮಗುವನ್ನು ಮಣಿಪಾಲದ ಮತ್ತೊಂದು ಆಸ್ಪತ್ರೆಗೆ ಕರೆದೊಯ್ದಿತ್ತು. ಆದರೆ ಅಲ್ಲಿಯೂ ವೈದ್ಯರು ಮಗು ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *