Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಾಗ್ಪುರ ಹಿಂಸಾಚಾರ: 50ಕ್ಕೂ ಹೆಚ್ಚು ಜನರ ಬಂಧನ

Spread the love

ನಾಗ್ಪುರದಲ್ಲಿ ಮಾರ್ಚ್ 17ರಂದು ರಾತ್ರಿ ಭುಗಿಲೆದ್ದ ಹಿಂಸಾಚಾರ ಸಂಬಂಧ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂಸಾಚಾರದ ನಂತರ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಮಹಾಲಿನ ಚಿತ್ನಿಸ್ ಪಾರ್ಕ್ ಪ್ರದೇಶದಲ್ಲಿ ಸಂಜೆ 7:30ರ ಸುಮಾರಿಗೆ ಗಲಭೆ ಆರಂಭವಾಗಿ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚುವ ಘಟನೆಗಳು ನಡೆದಿವೆ. ಈ ವೇಳೆ 33 ಪೊಲೀಸರಿಗೆ ಗಾಯಗಳಾಗಿವೆ.

ನಗರ ಪೊಲೀಸ್ ಕಮಿಷನರ್ ರವೀಂದರ್ ಕುಮಾರ್ ಸಿಂಗಾಲ್ ಅವರು ಪರಿಸ್ಥಿತಿ ಈಗ ನಿಯಂತ್ರಣದಲ್ಲಿ ಇರುವುದಾಗಿ ತಿಳಿಸಿದ್ದಾರೆ. ಪೊಲೀಸರು ಸಿಸಿಟಿವಿ ಮತ್ತು ಸಾಮಾಜಿಕ ಮಾಧ್ಯಮದ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಗುರುತಿಸುತ್ತಿದ್ದಾರೆ.
ಇದಕ್ಕೂ ಮುನ್ನ ಬಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ ನಡೆಸಿದ್ದು, ಧಾರ್ಮಿಕ ಪುಸ್ತಕ ಸುಟ್ಟಿದ್ದೆಂಬ ವದಂತಿ ಹಬ್ಬಿದ ನಂತರ ಗಲಭೆ ಆರಂಭಗೊಂಡಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಹಿಂಸಾಚಾರವನ್ನು “ಸೂಕ್ಷ್ಮವಾಗಿ ಯೋಜಿತ ದಾಳಿ” ಎಂದು ಹೇಳಿದ್ದಾರೆ.

ಶಾಂತಿ ಕಾಪಾಡಲು ನಾಗರಿಕರಿಗೆ ಮನವಿ ಮಾಡಿರುವ ಪೊಲೀಸರು, ಕರ್ಫ್ಯೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ ನೀಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *