Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಕ್ಸಲ್ ಎನ್‌ಕೌಂಟರ್: ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಯೋಧ ಹುತಾತ್ಮ

Spread the love

ಛತ್ತೀಸಗಢ:ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಯೋಧ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಸಂಜೆ ದಟ್ಟ ಅರಣ್ಯದ ಅಭುಜ್‌ಮದ್ ಪ್ರದೇಶದಲ್ಲಿ ಮಾವೋವಾದಿಗಳೊಂದಿಗೆ ನಡೆದ ಪ್ರಮುಖ ಎನ್‌ಕೌಂಟರ್ ನಂತರ ಭದ್ರತಾ ಸಿಬ್ಬಂದಿ ಹಿಂತಿರುಗುತ್ತಿದ್ದ ವೇಳೆ ಐಇಡಿ ಸ್ಫೋಟಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾರಾಯಣಪುರ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡುಗಳಲ್ಲಿ ನಡೆದ ಈ ಎನ್‌ಕೌಂಟರ್‌ನಲ್ಲಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು (70) ಸೇರಿದಂತೆ ಕನಿಷ್ಠ 27 ನಕ್ಸಲರು ಸಾವಿಗೀಡಾಗಿದ್ದಾರೆ.

ಎನ್‌ಕೌಂಟರ್‌ನಿಂದ ಹಿಂದಿರುಗುತ್ತಿದ್ದ ವೇಳೆ ಬಿಜಾಪುರ ಡಿಆರ್‌ಜಿಗೆ ಸೇರಿದ ಯೋದ ರಮೇಶ್ ಹೆಮ್ಲಾ ಎಂಬುವವರು ಒತ್ತಡ-ಸಕ್ರಿಯಗೊಳಿಸಿದ ಐಇಡಿ ಮೇಲೆ ಹೆಜ್ಜೆ ಇಟ್ಟಿದ್ದಾರೆ. ಇದರಿಂದಾಗಿ ಸ್ಫೋಟ ಸಂಭವಿಸಿ, ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬುಧವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಮತ್ತೊಬ್ಬ ಡಿಆರ್‌ಜಿ ಸದಸ್ಯ ಖೋಟ್ಲುರಾಮ್ ಕೊರ್ರಂ ಬಲಿಯಾಗಿದ್ದಾನೆ. ಕೊರ್ರಂ ನಾರಾಯಣಪುರದ ಓರ್ಚಾ ಪೊಲೀಸ್ ಠಾಣೆ ಪ್ರದೇಶದ ಭಟ್ಬೇಡ ಗ್ರಾಮದ ನಿವಾಸಿ.

ಗುರುವಾರ ಮಧ್ಯಾಹ್ನ 12 ಗಂಟೆಗೆ ನಾರಾಯಣಪುರದ ಪೊಲೀಸ್ ಲೈನ್ಸ್‌ನಲ್ಲಿ ಹುತಾತ್ಮರಾದ ಇಬ್ಬರು ಯೋಧರಿಗೆ ಮಾಲಾರ್ಪಣೆ ಸಮಾರಂಭ ನಡೆಯಲಿದ್ದು, ನಂತರ ಅವರ ಶವಗಳನ್ನು ಅವರವರ ಊರುಗಳಿಗೆ ಕಳುಹಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *