ನೀರ್ಚಾಲು: ಕಾರು-ಬೈಕ್ ಢಿಕ್ಕಿ, ಸವಾರ ಸಾವು

ಕಾಸರಗೋಡು: ಕಾರು, ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ನೀರ್ಚಾಲು ಎಂಬಲ್ಲಿ ನಡೆದಿದೆ. ಸೀತಾಂಗೋಳಿ ಪೆಟ್ರೋಲ್ ಬಂಕ್ ನೌಕರ ಕನ್ಯಪ್ಪಾಡಿ ಕನ್ಯಪ್ಪಾಡಿ ಬಳಿಯ ಮಾಡತ್ತಡ್ಕ ನಿವಾಸಿ ಮುಹಮ್ಮದ್ ಝೈನುದ್ದೀನ್ (29)ಮೃತಪಟ್ಟವರು.


ಬೆಳಿಗ್ಗೆ ಪೆಟ್ರೋಲ್ ಬಂಕ್ ನ ಕೆಲಸಕ್ಕೆಂದು ಬೈಕ್ ನಲ್ಲಿ ಹೋಗುವಾಗ ನೀರ್ಚಾಲು ಕೆಳಗಿನ ಪೇಟೆಯಲ್ಲಿ ಅಪಘಾತ ನಡೆದಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಯಲ್ಲಿರಿ ಸಲಾಗಿದ್ದ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ