ಹೊಸದಿಲ್ಲಿ: ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ; ಶ್ರೇಯಸ್ ಅಯ್ಯರ್ ನಾಯಕ!

ಹೊಸದಿಲ್ಲಿ: ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಶ್ರೇಯಸ್ ಅಯ್ಯರ್ ನಾಯಕತ್ವ ಮುಂದುವರಿಸಲಿದ್ದು, ವೇಗದ ಬೌಲರ್ ಜಸ್ಟೀತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ. ಆದರೆ ತಂಡಕ್ಕೆ ಕಂಬ್ಯಾಕ್ ಮಾಡಲು ಸಿದ್ಧತೆ ನಡೆಸುತ್ತಿದ್ದ ಹಾರ್ದಿಕ್ ಪಾಂಡ್ಯ ಅವರಿಗೆ ಮತ್ತೊಂದು ಹಿನ್ನಡೆಯಾಗಿದ್ದು, ಸರಣಿಯಿಂದ ಹೊರಗುಳಿದಿದ್ದಾರೆ.
ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಇತ್ತೀಚಿನ ಸರಣಿಗಳು ಹಾಗೂ ಜಿಂಬಾಬೈ ಪ್ರವಾಸದಿಂದ ಹೊರಗುಳಿದಿದ್ದ ಜಸ್ಟೀತ್ ಬುಮ್ರಾ ಇದೀಗ ಟಿ20 ತಂಡಕ್ಕೆ ಮರಳಿದ್ದಾರೆ. ಜಿಂಬಾಬ್ ಸರಣಿಯಿಂದ ಹೊರಗುಳಿದಿದ್ದ ಸಂಜು ಸ್ಯಾಟ್ಸನ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಟೋಯ್, ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ಕೂಡ ತಂಡಕ್ಕೆ ವಾಪಸಾಗಿದ್ದಾರೆ.

ಶ್ರೇಯಸ್ ಅಯ್ಯರ್ ತಂಡದ ನಾಯಕತ್ವವನ್ನು ಮುಂದುವರಿಸಲಿದ್ದು, ತಿಲಕ್ ವರ್ಮಾ ಉಪನಾಯಕರಾಗಿದ್ದಾರೆ. ಜಿಂಬಾಬ್ ಸರಣಿಯಲ್ಲಿ ಸ್ಥಾನ ಪಡೆದಿದ್ದ ಯುವ ಬ್ಯಾಟಿಂಗ್ ಪ್ರತಿಭೆ ವೈಭವ್ ಸೂರ್ಯವಂಶಿ ಕೂಡ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸಲ್ಲಿ ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದ ವೇಳೆ ಕಾಲಿನಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ ಅವರ ಕಂಬ್ಯಾಕ್ ಯೋಜನೆಗೆ ಹಿನ್ನಡೆಯಾಗಿದೆ. ಚೇತರಿಕೆಯಲ್ಲಿ ಉತ್ತಮ ಪ್ರಗತಿ ಸಾಧಿಸುತ್ತಿದ್ದರೂ, ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಪಾಂಡ್ಯ ಅವರನ್ನು ಆಯ್ಕೆ ಮಾಡಲಾಗಿಲ್ಲ.
ತಂಡದಲ್ಲಿ ಸಂಜು ಸ್ಯಾಟ್ಸನ್ ಮತ್ತು ಇಶಾನ್ ಕಿಶನ್ ವಿಕೆಟೀಪರ್ಗಳಾಗಿ ಆಯ್ಕೆಯಾಗಿದ್ದಾರೆ. ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ ಮತ್ತು ಶಿವಂ ದುಬೆ ಬ್ಯಾಟಿಂಗ್ ವಿಭಾಗದಲ್ಲಿದ್ದಾರೆ.
ಆಂಡರ್ಗಳಾಗಿ ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದಿದ್ದಾರೆ. ವರುಣ್ ಚಕ್ರವರ್ತಿ ಹಾಗೂ ರವಿ ಬಿಷ್ಟೋಯ್ ತಂಡದ ಪ್ರಮುಖ ಸ್ಪಿನ್ನರ್ಗಳಾಗಿದ್ದಾರೆ.
ವೇಗದ ಬೌಲಿಂಗ್ ವಿಭಾಗವನ್ನು ಜಸ್ಟೀತ್ ಬುಮ್ರಾ, ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ಮುನ್ನಡೆಸಲಿದ್ದಾರೆ. ಆದರೆ ಬುಮ್ರಾ, ನಿತೀಶ್ ರೆಡ್ಡಿ ವಾಷಿಂಗ್ಟನ್ ಸುಂದರ್ ಮತ್ತು ಹರ್ಷಿತ್ ರಾಣಾ ಅವರ ಆಯ್ಕೆ ಫಿಟೈಸ್ ಕ್ಲಿಯರೆನ್ಸೆ ಒಳಪಟ್ಟಿದೆ.
ಜಿಂಬಾಬ್ ಸರಣಿಯಲ್ಲಿ ತಂಡದಲ್ಲಿದ್ದ ಎಂಟು ಆಟಗಾರರು ಈ ಬಾರಿ ಅವಕಾಶ ಕಳೆದುಕೊಂಡಿದ್ದಾರೆ. ಸೂರ್ಯಾಂತ್ ಶೆಡೈ ರಿಂಕು ಸಿಂಗ್, ಹರ್ಷ ದುಬೆ, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಅಶೋಕ್ ಶರ್ಮಾ, ಮಯಾಂಕ್ ಯಾದವ್ ಮತ್ತು ಪ್ರಭಿಮ್ರಾನ್ ಸಿಂಗ್ ಈ ಪಟ್ಟಿಯಲ್ಲಿದ್ದಾರೆ.
ಜಿಂಬಾಬ್ ಸರಣಿಯಲ್ಲಿ ಸಾಮಾನ್ಯ ಟಿ20 ತಂಡದ ಹೊರಗಿನ ಹಲವು ಆಟಗಾರರಿಗೆ ಅವಕಾಶ ನೀಡಿದ್ದ ಆಯ್ಕೆದಾರರು, ಇದೀಗ ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಹೆಚ್ಚಿನ ಅನುಭವ ಹೊಂದಿರುವ ಆಟಗಾರರನ್ನು ಒಳಗೊಂಡ ತಂಡಕ್ಕೆ ಮರಳಿದ್ದಾರೆ.