ನಿಟ್ಟೆ ವಿದ್ಯಾರ್ಥಿ ಅಭಿನಂದನ್ 36 ದಿನದಿಂದ ನಾಪತ್ತೆ

ಬೈಂದೂರು: ಉಡುಪಿ ಜಿಲ್ಲೆಯ ನಿಟ್ಟೆ ಕಾಲೇಜು ವಿದ್ಯಾರ್ಥಿ ಯಡ್ತರೆ ಗ್ರಾಮದ ಮಹಾಬಲೇಶ್ವರ ಎಂಬವರ ಮಗ ಅಬಿನಂದನ್(20) ನಾಪತ್ತೆಯಾಗಿರುವ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬಿನಂದನ್ ನಿಟ್ಟೆ ಕಾಲೇಜಿನಲ್ಲಿ ದ್ವಿತಿಯ ವರ್ಷದ ವಿಎಲ್ಎಸ್ಐ ಪದವಿಯಲ್ಲಿ ಓದಿಕೊಂಡು ಕಾಲೇಜಿನ ಹಾಸ್ಟೇಲ್ನಲ್ಲಿ ಉಳಕೊಂಡಿದ್ದನು. ರಜೆಯಲ್ಲಿ ಬೈಂದೂರು ಮನೆಗೆ ಬಂದು ಹೋಗುತ್ತಿದ್ದನು.
ಫೆ.೨೧ರಂದು ಮನೆಗೆ ಬಂದು ಮರುದಿನ ಮನೆಯಿಂದ ಕಾಲೇಜಿಗೆ ಹೋದವನು ಒಂದೆರಡು ಬಾರಿ ಕರೆ ಮಾಡಿದ್ದನು. ಮಹಾಬಲೇಶ್ವರ ಮಾ.26ರಂದು ನಿಟ್ಟೆ ಕಾಲೇಜಿಗೆ ಹೋಗಿ ಮಗನ ಬಗ್ಗೆ ವಿಚಾರ ಮಾಡಿದಾಗ ಆತ ರಜೆಯಲ್ಲಿ ಹೋದವ ಕಾಲೇಜಿಗೆ ಬರಲಿಲ್ಲ ಎಂದು ಹೇಳಿದರು. ಆತನ ಮೊಬೈಲ್ ಫೋನ್ ಕೂಡ ಆಫ್ ಆಗಿತ್ತು ಎಂದು ತಿಳಿದು ಬಂದಿದೆ.