Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಾವು ಅಲ್ಲ, ಪತ್ನಿಯೇ ವಿಲನ್: ಮೀರತ್ ನಿದ್ದೆಯಲ್ಲಿದ್ದಾಗ 10 ಸಲ ಹಾವು ಕಚ್ಚಿದ ಪ್ರಕರಣದಲ್ಲಿ ಟ್ವಿಸ್ಟ್

Spread the love

ಮೀರತ್ : ಮೀರತ್ ನಲ್ಲಿ ಹತ್ತು ಬಾರಿ ಹಾವು ಕಚ್ಚಿ ಯುವಕ ಸಾವನ್ನಪ್ಪಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಎರಡು ದಿನಗಳ ಹಿಂದೆ ಅಮಿತ್ ಅಲಿಯಾಸ್ ವಿಕ್ಕಿ ಕಶ್ಯಪ್ ಎಂಬಾತ ಮಲಗಿದ್ದಾಗ ಹಾವು ಕಚ್ಚಿ ಸಾವನ್ನಪ್ಪಿದ್ದಾನೆ ಎಂಬ ಸುದ್ದಿ ಬಂದಿತ್ತು. ಅಮಿತ್ ಗೆ ಹತ್ತು ಬಾರಿ ಹಾವು ಕಚ್ಚಿತ್ತು. ಪ್ರಕರಣದಲ್ಲಿ ಹಾವು ವಿಲನ್ ಆಗಿತ್ತು. ಆದ್ರೆ ಪ್ರಕರಣದ ತನಿಖೆ ಶುರುವಾದಾಗ ನಿಜವಾದ ವಿಲನ್ ಯಾರು ಎಂಬ ಸತ್ಯ ಹೊರಗೆ ಬಿದ್ದಿದೆ. ವಾಸ್ತವವಾಗಿ ಹಾವಿನ ಪಾತ್ರ ಇಲ್ಲಿ ಏನೂ ಇಲ್ಲ.

ಎಲ್ಲ ವಿಕ್ಕಿ ಪತ್ನಿಯ ಕೈವಾಡ. ಮರಣೋತ್ತರ ಪರೀಕ್ಷೆ ವೇಳೆ ಸತ್ಯ ಬಯಸಲು : ಪೋಸ್ಟ್ ಮಾರ್ಟಮ್ ವರದಿ ನೋಡಿ ಪೊಲೀಸರು ದಂಗಾದ್ರು. ಇದ್ರಲ್ಲಿ ಅಮಿತ್ ಸಾವು ಹಾವುಕಚ್ಚಿ ಆಗ್ಲಿಲ್ಲ, ಕತ್ತು ಹಿಸುಕಿ ಆಗಿದೆ ಅಂತಿತ್ತು. ತಕ್ಷಣ ಅಲರ್ಟ್ ಆದ ಪೊಲೀಸರು ತನಿಖೆ ಶುರು ಮಾಡಿದ್ರು. ಆಗ ಒಂದೊಂದೇ ಸುಳಿವು ಸಿಕ್ತಾ ಹೋಯ್ತು. ಪೊಲೀಸರ ಕಣ್ಣು ಮೊದಲು ಬಿದ್ದಿದ್ದು ಅಮಿತ್ ಪತ್ನಿ ರವಿತಾ ಮೇಲೆ.
ಸಾಕ್ಷ್ಯ ಮುಚ್ಚಲು ಹಾವಿನ ಬಳಕೆ : ಅಮಿತ್ ಪತ್ನಿ ರವಿತಾ ಹಾಗೂ ಅದೇ ಊರಿನ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಆಗ ರವಿತಾ ಸತ್ಯ ಹೊರ ಹಾಕಿದ್ದಾಳೆ. ರವಿತಾಗೆ ಅದೇ ಗ್ರಾಮದ ಯುವಕನ ಜೊತೆ ಅಕ್ರಮ ಸಂಬಂಧವಿತ್ತು. ಇವರಿಬ್ಬರ ಪ್ರೀತಿಗೆ ಅಮಿತ್ ಅಡ್ಡಿಯಾಗಿದ್ದ. ಅಮಿತ್ ನನ್ನು ಮುಗಿಸಿ ತಮ್ಮ ದಾರಿ ಸುಗಮಗೊಳಿಸಿಕೊಳ್ಳಲು ಪ್ರೇಮಿಗಳು ಪ್ಲಾನ್ ಮಾಡಿದ್ರು. ಅಮಿತ್ ಸಾವು ದುರ್ಘಟನೆ ಎಂದು ಬಿಂಬಿಸಲು ಮುಂದಾದ್ರು.

ಮಾರುಕಟ್ಟೆಯಿಂದ ಹಾವೊಂದನ್ನು ಖರೀದಿ ಮಾಡಿದ್ದ ಇವರು, ಅಮಿತ್ ಕತ್ತು ಹಿಸುಕಿ ಹತ್ಯೆ ಮಾಡಿದ್ರು. ನಂತ್ರ ಅವನ ಬೆಡ್ ಮೇಲೆ ಹಾವನ್ನು ಇಟ್ಟಿದ್ದರು. ಅಷ್ಟೇ ಅಲ್ಲ ಇದ್ರ ವಿಡಿಯೋ ಮಾಡಿ, ಸಾಕ್ಷ್ಯವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಆರಂಭದಲ್ಲಿ ಎಲ್ಲರೂ ಅಮಿತ್ ಹಾವು ಕಚ್ಚಿ ಸತ್ತಿದ್ದಾನೆ ಎಂಬುದನ್ನು ನಂಬಿದ್ದರಿಂದ ರವಿತಾ ದಾರಿ ಸುಗಮವಾಯ್ತು. ಆದ್ರೆ ಪೊಲೀಸ್ ಕೈಗೆ ಸಿಕ್ಕಿಬಿದ್ದ ರವಿತಾ ಈಗ ಜೈಲೂಟ ತಿನ್ನುವಂತಾಗಿದೆ. ಇಬ್ಬರೂ ತಮ್ಮ ತಪ್ಪು ಒಪ್ಪಿಕೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *