Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಿಂದೂ ಸಂಘಟನೆಗಳ ಮೇಲಿನ ಮೇಲ್ವಿಚಾರಣೆ: ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

Spread the love

ಮಂಗಳೂರು : ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬಳಿಕ ಕಾನೂನು ಸುವವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರ ಲೊಕೇಶನ್ ಮತ್ತು ಮಾಹಿತಿ ಸಂಗ್ರಹದಂತಹ ಕ್ರಮ ಕೈಗೊಂಡಿದ್ದ ದಕ್ಷಿಣಕನ್ನಡ ಪೊಲೀಸ್ ಇಲಾಖೆಗೆ ಇದೀಗ ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.

ದಕ್ಷಿಣಕನ್ನಡ ಜಿಲ್ಲೆಗೆ ನೂತನ ಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಪೊಲೀಸರು ಹಿಂದೂ ಸಂಘಟನೆಗಳ ಮುಖಂಡರ ಮನೆಗೆ ಮಧ್ಯರಾತ್ರಿ ಆಗಮಿಸಿ ಅವರ ಪೋಟೋ ಮತ್ತು ಲೊಕೇಶನ್ ಕುರಿತ ಮಾಹಿತಿ ಕಲೆಹಾಕಿದ್ದಾರೆ. ಇದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ದ.ಕ. ಜಿಲ್ಲಾ ಪೊಲೀಸ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಾಧಿಕಾರವು ದ.ಕ. ಜಿಲ್ಲಾ ಪೊಲೀಸ್ ಇಲಾಖೆಗೆ ಕಾರಣ ಕೇಳಿ ನೋಟಿಸ್‌ ನೀಡಿದೆ.

ಈ ಕುರಿತಾದ ದೂರನ್ನು ದಾಖಲಿಸಿಕೊಂಡಿರುವ ಪ್ರಾಧಿಕಾರವು ಜೂ.17ಕ್ಕೆ ವಿಚಾರಣೆ ಕೈಗೆತ್ತಿಕೊಳ್ಳಲಿದೆ ಎಂದು ತಿಳಿದುಬಂದಿದೆ. ಇದಕ್ಕೂ ಮೊದಲು ಕಾರಣ ಕೇಳಿ ನೋಟಿಸ್ ನೀಡಿದೆ. ‘ಪ್ರಾಧಿಕಾರದಿಂದ ಕಾರಣ ಕೇಳಿ ನೋಟಿಸ್ ಬಂದಿದೆ. ನಾವು ಕಾನೂನು ಪ್ರಕಾರವಾಗಿಯೇ ನಡೆದುಕೊಂಡಿದ್ದು, ಪ್ರಾಧಿಕಾರಕ್ಕೆ ಸೂಕ್ತ ವಿವರಣೆ ನೀಡಲಾಗುವುದು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಡಾ.ಅರುಣ್ ಅವರು ಜಿಲ್ಲೆಗೆ ನೂತನ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕಳೆದ 10 ವರ್ಷಗಳಲ್ಲಿ ಜಿಲ್ಲೆಯಲ್ಲಿ ನಡೆದ ಹತ್ಯೆಗಳ ಸಮಗ್ರ ಮಾಹಿತಿ ಪಡೆದುಕೊಂಡಿದ್ದು, ಈ ವೇಳೆ ಹತ್ಯೆ ಆರೋಪಿಗಳು ಕೋಮು ಸಂಘಟನೆಗಳ ಜತೆ ಸಂಪರ್ಕಹೊಂದಿರುವುದು ಪತ್ತೆಯಾಗಿತ್ತು. ಇದರ ಆಧಾರದಲ್ಲಿ ಕೋಮು ಸಂಘಟನೆಗಳಿಗೆ ಸೇರಿದ ಪ್ರಮುಖರು, ಕಾರ್ಯಕರ್ತರ ಪಟ್ಟಿ ಸಿದ್ದಪಡಿಸಿ ನಿತ್ಯವೂ ಅವರ ಲೊಕೇಶನ್, ಕಾರ್ಯ ಚಟುವಟಿಕೆಗಳ ಮಾಹಿತಿ ಸಂಗ್ರಹಕ್ಕೆ ನಿರ್ದೇಶನ ನೀಡಿದ್ದರು. ಮಾತ್ರವಲ್ಲದೆ, 36 ಮಂದಿಯ ಗಡೀಪಾರಿಗೆ ದಿಟ್ಟ ನಿರ್ಧಾರ ಕೈಗೊಂಡು ಪ್ರಕ್ರಿಯೆ ಆರಂಭಿಸಿದ್ದರು. ಹಿಂದೂ ಇದು ಸಂಘಟನೆಗಳು ಹಾಗೂ ಬಿಜೆಪಿಯ ಕೆಂಗಣ್ಣಿಗೆ ಕಾರಣವಾಗಿತ್ತು.

ಪೊಲೀಸರು ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರನ್ನು ಗುರಿ ಯಾಗಿಸಿಕೊಂಡು ತೊಂದರೆ ಕೊಡುತ್ತಿದ್ದಾರೆ. ರಾತ್ರಿ ಹೊತ್ತು ಮನೆಗೆ ತೆರಳಿ ಅವರ ನಿವಾಸಗಳ ಫೋಟೋ ತೆಗೆದು, ಜಿಪಿಎಸ್ ಮಾಹಿತಿ ಸಂಗ್ರಹಿಸುತ್ತಿದ್ದಾರೆ, ಕಾನೂನಾತ್ಮಕ ಇಲ್ಲದೆ ಅಥವಾ ಕಾರಣವಿಲ್ಲದೆ ನಡೆಯುತ್ತಿದ್ದು, ಬಾಹಿರವಾಗಿದೆ. ಯಾವುದೇ ವಾರಂಟ್ ನ್ಯಾಯಸಮ್ಮತ ಇದೆಲ್ಲವೂ ಕಾನೂನು ಹಿಂದೂ ಗುರಿ ಸಮುದಾಯದ ಸದಸ್ಯರನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಪೊಲೀಸ್ ದೂರು ಪ್ರಾಧಿಕಾರಕ್ಕೆ ದೂರು ನೀಡಿದ್ದರು. ಅಲ್ಲದೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಗೂ ಪತ್ರ ಬರೆದಿದ್ದರು.


Spread the love
Share:

administrator

Leave a Reply

Your email address will not be published. Required fields are marked *