Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂತ್ರಾಲಯದಲ್ಲಿ ಪಹಲ್ಗಾಮ್ ದಾಳಿ ಇಫೆಕ್ಟ್:ಭದ್ರತೆಯ ಹೈ ಅಲರ್ಟ್

Spread the love

ರಾಯಚೂರು:ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಪ್ರಕರಣ ಹಿನ್ನೆಲೆಯಲ್ಲಿ ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಆಂಧ್ರ‌ ಪ್ರದೇಶ ಪೊಲೀಸರು ಹೈ ಅಲರ್ಟ್ ವಹಿಸಿದ್ದಾರೆ.
ಮಂತ್ರಾಲಯಂ ಹಾಗೂ ಮಾಧವರಂ ಠಾಣೆ ಪೊಲೀಸರಿಂದ ಶ್ರೀ ರಾಘವೇಂದ್ರ ಸ್ವಾಮಿ ಮಠ ಹಾಗೂ ಮಂತ್ರಾಲಯದಲ್ಲಿ ತೀವ್ರ ತಪಾಸಣೆ ಕೈಗೊಳ್ಳಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಮಂತ್ರಾಲಯದಲ್ಲಿ ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ನಿಂದ ಎಲ್ಲೆಡೆ ತಪಾಸಣೆ ನಡೆಸಲಾಗಿದೆ. ಮಠದ ಪ್ರಾಂಗಣ, ಭೋಜನ ಶಾಲೆ, ತುಂಗಭದ್ರಾ ನದಿತೀರ, ಬಸ್ ನಿಲ್ದಾಣ ವಸತಿಗೃಹಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಅನುಮಾನಾಸ್ಪದವಾಗಿ ಕಂಡ ಭಕ್ತರ ಬ್ಯಾಗ್ ಗಳ ತಪಾಸಣೆ ಕೂಡ ಮಾಡಲಾಗಿದೆ.

ಮಠಕ್ಕೆ ಸಾವಿರಾರು ಭಕ್ತರು ಬರುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಬಿಗಿಗೊಳಿಸಲು ಮಂತ್ರಾಲಯ ಮಠದ ಆಡಳಿತ ಮಂಡಳಿಗೆ ಸೂಚನೆ ಕೂಡ ನೀಡಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *