Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಉಡುಪಿ ಕೃಷ್ಣ ಮಠಕ್ಕೆ ಇಂದು ‘ಪಾರ್ಥಸಾರಥಿ ಸುವರ್ಣ ರಥ’ ಸಮರ್ಪಣೆ

Spread the love

ಉಡುಪಿ: ತಮ್ಮ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಸಂಕಲ್ಪಿಸಿದಂತೆ ಪಾರ್ಥಸಾರಥಿ ಸುವರ್ಣ ರಥದ ಸಮರ್ಪಣೆ ನಾಳೆ (ಡಿ.26) ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರು ತಿಳಿಸಿದ್ದಾರೆ.

ಚತುರ್ಥ ಪರ್ಯಾಯದ ಅಂತಿಮ ಘಟ್ಟ ತಲುಪಿರುವ ಪುತ್ತಿಗೆಶ್ರೀಗಳು ಗೀತಾಮಂದಿರದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ತಾವು ನಡೆಸಿದ ಕೋಟಿ ಗೀತ ಲೇಖನ ಯಜ್ಞದ ಸ್ಮರಣಾರ್ಥವಾಗಿ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥವನ್ನು ಅರ್ಪಣೆ ಮಾಡುತ್ತಿರುವುದಾಗಿ ತಿಳಿಸಿದರು.

ಶುಕ್ರವಾರ ಅಪರಾಹ್ನ 3:30ಕ್ಕೆ ನಗರದ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಲ್ಲಿ ಮಂತ್ರಾಲಯ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಸುವರ್ಣ ರಥವನ್ನು ಉಡುಪಿ ಶ್ರೀಕೃಷ್ಣ ಮಠಕ್ಕೆ ತರಲಾಗುವುದು. ಬಳಿಕ ರಾಜಾಂಗಣದಲ್ಲಿ ಇದರ ಸಮರ್ಪಣೆ ನಡೆಯಲಿದೆ ಎಂದು ಪುತ್ತಿಗೆಶ್ರೀಗಳು ತಿಳಿಸಿದರು.

ಪಾರ್ಥಸಾರಥಿ ಸುವರ್ಣ ರಥದ ಪ್ರಥಮ ರಥೋತ್ಸವ ಡಿ.27ರ ಸಂಜೆ 6 ಗಂಟೆಗೆ ನಡೆಯಲಿದೆ. ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥರು ರಥದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸುವರು. ಬಳಿಕ ರಥಬೀದಿಯಲ್ಲಿ ರಥೋತ್ಸವ ನಡೆಯಲಿದೆ. ಮುಂದೆ ಪಾರ್ಥಸಾರಥಿ ಸುವರ್ಣ ರಥವನ್ನು ಶ್ರೀಕೃಷ್ಣ ಮಠದ ಸುತ್ತು ಪೌಳಿಯಲ್ಲಿ ರಥೋತ್ಸವಕ್ಕೆ ಬಳಸಲಾಗುವುದು ಎಂದೂ ಅವರು ಹೇಳಿದರು.


Spread the love
Share:

administrator

Leave a Reply

Your email address will not be published. Required fields are marked *