Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಪಿಡಿಒ ಅಮಾನತು: ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಆರೋಪ

Spread the love

ರಾಯಚೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚನದಲ್ಲಿ ಭಾಗಿಯಾದ ಆರೋಪದಡಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯನ್ನು (PDO) ಅಮಾನತು ಮಾಡಿ ಸರ್ಕಾರ ಆದೇಶಿಸಿದೆ.

ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.

ಇದೇ ಅಕ್ಟೋಬರ್12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಂಥಸಂಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು.

ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *