Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

₹7.11 ಕೋಟಿ ದರೋಡೆ ಭೇದಿಸಿದ ಪೊಲೀಸರು: ಮೂವರ ಬಂಧನ, ₹5.76 ಕೋಟಿ ಸೀಜ್

Spread the love

ಬೆಂಗಳೂರು: ಹಾಡಹಗಲೇ ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿದ ಪ್ರಕರಣವನ್ನು ಬೆಂಗಳೂರು ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದಾರೆ. ಪ್ರಕರಣದಲ್ಲಿ 5.76 ಕೋಟಿ ಹಣ ಸೀಜ್ ಮಾಡಲಾಗಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು, ಒಟ್ಟು 8 ಜನರ ಗುಂಪಿನಿಂದ ಕೃತ್ಯ ನಡೆದಿದೆ. ಈಗ ಸದ್ಯ 3 ಆರೋಪಗಳನ್ನು ಬಂಧಿಸಲಾಗಿದೆ. 5.76 ಕೋಟಿ ಹಣ ಸೀಜ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಒಟ್ಟು 8 ಜನರ ಗುಂಪಿನಿಂದ ಕೃತ್ಯ ನಡೆದಿದೆ. ಈಗ ಸದ್ಯ 3 ಆರೋಪಿಗಳನ್ನು ಬಂಧನ ಮಾಡಲಾಗಿದೆ. 30 ತಾಸು ತಡವಾಗಿ ಮಾಹಿತಿ ಬಂದಿದೆ. ಮೊದಲು ಡಿಜೆ ಹಳ್ಳಿಯಲ್ಲಿ ಆಗಿದೆ ಅಂತ ಮಾಹಿತಿ ಬಂದಿತ್ತು. ಘಟನೆ ನಡೆದ ಒಂದೂವರೆ ಗಂಟೆಯ ಬಳಿಕ ಮಾಹಿತಿ ನೀಡಿದ್ದಾರೆ. ತಕ್ಷಣವೇ ಎಲ್ಲಾ ಭಾಗಗಳಲ್ಲಿ ನಾಕಾಬಂಧಿ ಹಾಕಲಾಗಿತ್ತು. ದರೋಡೆಕೋರರು ಮೊಬೈಲ್ ಬಳಸುತ್ತಿರಲಿಲ್ಲ. ಸಿಸಿಟಿವಿ ಕಾಣದ ಸ್ಥಳಗಳಲ್ಲಿ ವಾಹನ ನಿಲುಗಡೆ ಮಾಡಿದ್ದರು. ತನಿಖೆಯ ದಾರಿ ತಪ್ಪಿಸಲು ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಿದ್ದಾರೆ. ಘಟನೆ ನಡೆದ ದಿನ ಹಣ ತೆಗೆದುಕೊಂಡು ಹೋದ ವಾಹನ ಹಿಡಿಯಲಿಕ್ಕೆ ಆಗ್ಲಿಲ್ಲ. ಅನೇಕ ವಾಹನ ಬಳಸಿದ್ದಾರೆ. ವಾಹನಗಳ ನಂಬರ್ ಪದೇ ಪದೇ ಬದಲಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸಿಸಿಟಿವಿ ಇಲ್ಲದ ಕಡೆಯಲ್ಲಿ ಆರೋಪಿಗಳು ಓಡಾಡಿದ್ದಾರೆ. ವಾಹನವನ್ನು ಸಿಸಿಟಿವಿ ಇಲ್ಲದ ಜಾಗದಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ಗೋವಾದಲ್ಲಿ ಆರೋಪಿಗಳನ್ನು ಹುಡುಕಾಟ ನಡೆಸಿದ್ದಾರೆ. ಇನ್ನೂ ಹಣ ರಿಕವರಿ ಆಗಬೇಕು. 200 ಸ್ಟಾಪ್ ಬಳಕೆ ಮಾಡಲಾಗಿದೆ. 30 ಕ್ಕೂ ಹೆಚ್ಚು ಮಂದಿಯನ್ನ ವಿಚಾರಣೆ ಮಾಡಲಾಗಿದೆ. ಮೂವರು ಬಂಧಿಸಲಾಗಿದೆ ಎಂದು ವಿವರಿಸಿದ್ದಾರೆ.

ಗೋವಿಂದಪುರ ಪೇದೆ ಸೇರಿ ಮೂವರ ಬಂಧನವಾಗಿದೆ. ಮಾಜಿ ನೌಕರ, ಪೊಲೀಸ್ ಕಾನ್‌ಸ್ಟೇಬಲ್ ಬಂಧನ ಮಾಡಲಾಗಿದೆ. ಗೋಪಿ, ಜೋವಿಯಾರ್, ಅಣ್ಣಪ್ಪನಾಯ್ಕ್ ಬಂಧಿತ ಆರೋಪಿಗಳು. ಕ್ಲೂ ಇಲ್ಲದೆ ಆರೋಪಿಗಳು ಕೆಲಸ ಮಾಡಿದ್ದಾರೆ. ತಾಂತ್ರಿಕ ಮಾಹಿತಿ ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದು ಬಂಧನ ಮಾಡಲಾಗಿದೆ. 6 ರಿಂದ ಏಂಟು ಮಂದಿ ಸೇರಿ ಕೃತ್ಯ ಎಸಗಿದ್ದಾರೆ. ಒಂದು ಇನ್ನೋವಾ ಗಾಡಿ ಚಿತ್ತೂರಿನಲ್ಲಿ ಸಿಕ್ಕಿತ್ತು. ಬೆಂಗಳೂರಿನ ಹೊರ ಭಾಗದಲ್ಲಿ ಹಣ ರಿಕವರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ದರೋಡೆಕೋರರಿಗೆ ಶಿಕ್ಷೆ ಕೊಡಿಸುವ ನಿಟ್ಡಿನಲ್ಲಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣವನ್ನ ಪ್ರತಿಷ್ಠೆಯಾಗಿ ತಗೆದುಕೊಂಡು ಕೆಲಸ ಮಾಡಲಾಗಿದೆ. ಸಿಸಿಬಿ ಡಿಸಿಪಿ, ದಕ್ಷಿಣ ವಿಭಾಗದ ಡಿಸಿಪಿ ಹಾಗೂ ಇಬ್ಬರು ಜಂಟಿ ಪೊಲೀಸ್ ಆಯುಕ್ತರಿಂದ ಕಾರ್ಯಚರಣೆ ಮಾಡಲಾಗಿದೆ. 3 ತಿಂಗಳಿAದ ಪ್ಲಾನಿಂಗ್ ಮಾಡಿದ್ದಾರೆ. 15 ದಿನದಿಂದ ರೇಖಿ ಮಾಡಿದ್ರು. ಸಿಸಿಟಿವಿ ಇಲ್ಲದೇ ಇರೋ ಜಾಗವನ್ನು ನೋಡಿಕೊಂಡು ರೆಖಿ ಮಾಡಿದ್ರು ಎಂದಿದ್ದಾರೆ.

ಸಿಎಂಎಸ್ ಕಂಪನಿಯ ಲೋಪ ಕೂಡ ಇದೆ. ಸಿಎಂಎಸ್ ಕಂಪನಿಯು ರೂಲ್ಸ್ ವೈಲೇಷನ್ ಮಾಡಿದ್ದಾರೆ. ವೆಹಿಕಲ್ ಇನ್‌ಚಾರ್ಜ್ ಶಾಮೀಲಾಗಿ ಕೃತ್ಯ ಎಸಗಿದ್ದಾರೆ. ವಾಹನದ ಚಾಲಕ ಹೊರಗುತ್ತಿಗೆ ಡ್ರೈವರ್‌ ಆಗಿದ್ದ ಎಂದು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *