Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕತಾರ್‌ನಲ್ಲಿ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ NIA ಬಲೆಗೆ!

Spread the love

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ (Mangaluru) ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್ನನ್ನು ರಾಷ್ಟ್ರೀಯ ತನಿಖಾ ದಳ ( NIA ) ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್ ಕತಾರ್ನಲ್ಲಿ ತಲೆಮರೆಸಿಕೊಂಡಿದ್ದನು. ಶುಕ್ರವಾರ (ಜು.04) ಕತಾರ್ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದನು. ಹೀಗಾಗಿ, ಎನ್ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು.

ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ ಸೇರಿದಂತೆ ಒಟ್ಟು 28 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಿಎಫ್ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್ಐಎ ಸಲ್ಲಿಸಿದ ಚಾರ್ಜ್ ಶೀಟ್ನಲ್ಲಿದೆ.

ಪ್ರವೀಣ್ ನೆಟ್ಟಾರು ಕೊಲೆ

2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಗಂಭೀರತೆ ಅರಿತ ಎನ್‌ಐಎ ಆಗಸ್ಟ್ 4ರಂದು ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಈ ಪ್ರಕರಣದಲ್ಲಿ ಇದುವರೆಗೆ 28 ಜನ ಆರೋಪಿಗಳ ವಿರುದ್ಧ ಎನ್‌ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *