ಕೆಮಿಕಲ್ ಮಿಶ್ರಿತ ಹಾಲು ತಯಾರಿಕಾ ಘಟಕದ ಮೇಲೆ ದಾಳಿ: ಕೋಲಾರದಲ್ಲಿ ದಂಧೆ ಬಯಲಿಗೆ

ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸವಟೂರು ಗ್ರಾಮದಲ್ಲಿರುವ ಹರೀಶ್ ರೆಡ್ಡಿ ಎಂಬವರ ಘಟಕದ ಮೇಲೆ ದಾಳಿ ನಡೆಸಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸವಟೂರು ಗ್ರಾಮದಲ್ಲಿ ಹರೀಶ್ ರೆಡ್ಡಿ ತಿರುಮಲ ಹಾಲಿನ ಡೇರಿಗೆ ಹಾಲು ಪೂರೈಸುತ್ತಿದ್ದ.
ಈ ವೇಳೆ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ನಂದಕುಮಾರ್ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಕೆಮಿಕಲ್ ಸೇರಿದಂತೆ ಸಿಬ್ಬಂದಿಗಳು ಉಪಕರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಲಿನ ಮಾದರಿ ಸಂಗ್ರಹಿಸಿ ಅಧಿಕಾರಿಗಳು ಟೆಸ್ಟ್ ಗೆ ಕಳುಹಿಸಿದ್ದಾರೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.