ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಚಿಕಿತ್ಸೆಯ ನಿರ್ಲಕ್ಷ್ಯಕ್ಕೆ ಬಲಿಯಾದ ಅತ್ಯಾಚಾರ ಸಂತ್ರಸ್ತೆ

ಪಾಟ್ನಾ: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಗಂಟೆಗಟ್ಟಲೆ ಆಂಬ್ಯುಲೆನ್ಸ್ನಲ್ಲಿ ಕುಳಿತು ಅತ್ಯಾಚಾರ ಸಂತ್ರಸ್ತೆ ಪ್ರಾಣ ಬಿಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ (ಪಿಎಂಸಿಎಚ್) ಹೊರಗೆ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯನ್ನು ಆಂಬ್ಯುಲೆನ್ಸ್ನಲ್ಲಿ ಗಂಟೆಗಟ್ಟಲೆ ಕಾಯುವಂತೆ ಮಾಡಲಾಗಿತ್ತು. ಸಾಕಷ್ಟು ಪ್ರಯತ್ನದ ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತು. ಆದರೆ ಗಾಯ ತುಂಬಾ ಗಂಭೀರವಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾರೆ.
ಈ ಪ್ರಕರಣದಲ್ಲಿ ಮಾಡಲಾದ ಎಲ್ಲಾ ಆರೋಪಗಳನ್ನು ಪಾಟ್ನಾ ವೈದ್ಯಕೀಯ ಕಾಲೇಜಿನ ಅಧಿಕಾರಿಗಳು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ, ಅವರು ತಕ್ಷಣ ಕ್ರಮ ಕೈಗೊಂಡು ಬಾಲಕಿಗೆ ಚಿಕಿತ್ಸೆ ನೀಡಲು ಪ್ರಾರಂಭಿಸಿದರು ಎಂದು ಅವರು ಹೇಳಿದ್ದಾರೆ.
ಬಾಲಕಿಯ ಚಿಕ್ಕಪ್ಪ ನೀಡಿದ್ದ ಮಾಹಿತಿ ಪ್ರಕಾರ, ನಾವು ಶನಿವಾರ ಬೇರೆ ಆಸ್ಪತ್ರೆಯಿಂದ ಪಿಎಂಸಿಎಚ್ಗೆ ತಲುಪಿದಾಗ, ತುರ್ತು ವಿಭಾಗದ ಸಿಬ್ಬಂದಿ ಬೆಡ್ ಇಲ್ಲ ಎಂದು ಹೇಳಿದರು. ಹಲವಾರು ವಾರ್ಡ್ಗಳಿಗೆ ನಮ್ಮನ್ನು ಅಲೆಯುವಂತೆ ಮಾಡಿದರು. ಕೊನೆಗೆ ಎಲ್ಲಿಯೂ ಬೆಡ್ ಸಿಗಲಿಲ್ಲ.
ಈ ಪ್ರಕರಣದಲ್ಲಿ ಮಾಡಲಾದ ಎಲ್ಲಾ ಆರೋಪಗಳನ್ನು ಪಾಟ್ನಾ ವೈದ್ಯಕೀಯ ಕಾಲೇಜಿನ ಅಧಿಕಾರಿಗಳು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ, ಅವರು ತಕ್ಷಣ ಕ್ರಮ ಕೈಗೊಂಡು ಬಾಲಕಿಗೆ ಚಿಕಿತ್ಸೆ ನೀಡಲು ಪ್ರಾರಂಭಿಸಿದರು ಎಂದು ಅವರು ಹೇಳಿದ್ದಾರೆ.
ಬಾಲಕಿಯ ಚಿಕ್ಕಪ್ಪ ನೀಡಿದ್ದ ಮಾಹಿತಿ ಪ್ರಕಾರ, ನಾವು ಶನಿವಾರ ಬೇರೆ ಆಸ್ಪತ್ರೆಯಿಂದ ಪಿಎಂಸಿಎಚ್ಗೆ ತಲುಪಿದಾಗ, ತುರ್ತು ವಿಭಾಗದ ಸಿಬ್ಬಂದಿ ಬೆಡ್ ಇಲ್ಲ ಎಂದು ಹೇಳಿದರು. ಹಲವಾರು ವಾರ್ಡ್ಗಳಿಗೆ ನಮ್ಮನ್ನು ಅಲೆಯುವಂತೆ ಮಾಡಿದರು. ಕೊನೆಗೆ ಎಲ್ಲಿಯೂ ಬೆಡ್ ಸಿಗಲಿಲ್ಲ.
ಕೊನೆಗೆ ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಕಳುಹಿಸಲಾಯಿತು. ಆಕೆ ಆಂಬ್ಯುಲೆನ್ಸ್ನಲ್ಲಿ ಗಂಟೆಗಟ್ಟಲೆ ಕಾಯುತ್ತಿದ್ದಳು. ಕೆಲವು ರಾಜಕಾರಣಿಗಳ ಮಧ್ಯಸ್ಥಿಕೆ ಬಳಿಕ ಸಂಜೆ 5 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ದುರದೃಷ್ಟವಶಾತ್ ಅವರು ಸಾವನ್ನಪ್ಪಿದ್ದಾರೆ.
ಬಾಲಕಿ ಆಂಬ್ಯುಲೆನ್ಸ್ನಲ್ಲಿದ್ದಾಗ ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ರಾಮ್ ನೇತೃತ್ವದಲ್ಲಿ ಡಜನ್ಗಟ್ಟಲೆ ಕಾರ್ಮಿಕರು ಪಿಎಂಸಿಎಚ್ ತಲುಪಿ ಈ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟಿಸಿದರು. ರೋಹಿತ್ ಕುಮಾರ್ ಸಾಹ್ನಿ ಎಂಬಾತ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಹೊರಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಚಾಕುವಿನಿಂದ ಕುತ್ತಿಗೆಗೆ ಇರಿದಿದ್ದಾನೆ. ಸಂಜೆ 7 ಗಂಟೆ ಸುಮಾರಿಗೆ ಆಕೆ ಕೊಳದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.
ಅದೇ ರಾತ್ರಿ ಆರೋಪಿಯನ್ನು ಬಂಧಿಸಲಾಯಿತು. ಸಂತ್ರಸ್ತಳ ದೇಹದ ಮೇಲೆ ಹಲವಾರು ಗಂಭೀರ ಗಾಯಗಳಿದ್ದವು. ಕುತ್ತಿಗೆಗೆ ಗಾಯವಾಗಿದ್ದರಿಂದ ಮಾತನಾಡಲು ಸಾಧ್ಯವಾಗಲಿಲ್ಲ, ಆದರೆ ಸನ್ನೆಗಳ ಮೂಲಕ ಎಲ್ಲವನ್ನೂ ಹೇಳಿಕೊಂಡಳು.
ಆರೋಪಿ ನಮ್ಮ ಮನೆಗೆ ಮೀನು ಮಾರಾಟ ಮಾಡಲು ಬರುತ್ತಿದ್ದ. ಮಗಳನ್ನು ಕರೆದುಕೊಂಡು ಹೋಗುತ್ತಿದ್ದ. ನನಗೆ ಅನಾರೋಗ್ಯ ಇದ್ದ ಕಾರಣ ಗಮನ ಹರಿಸಲು ಸಾಧ್ಯವಾಗಲಿಲ್ಲ. ಎಚ್ಚರವಾದಾಗ ಮಗಳು ಎಲ್ಲಿಯೂ ಕಾಣಲಿಲ್ಲ. ನಂತರ ಯಾರೋ ಒಬ್ಬರು ಆಕೆಯನ್ನು ತನ್ನ ಸೈಕಲ್ನಲ್ಲಿ ಕರೆದುಕೊಂಡು ಹೋಗಿರುವುದಾಗಿ ಹೇಳಿದರು. ಕೂಡಲೇ ಹೋಗಿ ಹುಡುಕಿದಾಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು ಕಂಡು ಬಂದಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತು.