ಆರ್ಸಿಬಿ ಜಯದ ಸಂಭ್ರಮ ವೇಳೆ ಹೃದಯಾಘಾತದಿಂದ ಅಭಿಮಾನಿ ಸಾವು

ಬೆಳಗಾವಿ: ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇತಿಹಾಸ ಸೃಷ್ಟಿಸಿದೆ. 18 ವರ್ಷಗಳ ಬಳಿಕ ಚೊಚ್ಚಲ ಬಾರಿಗೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಆರ್ಸಿಬಿ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಆರ್ಸಿಬಿ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಗೆಲ್ಲುತ್ತಿದ್ದಂತೆ ಎಲ್ಲೆಡೆ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಈ ವೇಳೆ ಹೃದಯಾಘಾತದಿಂದ ಓರ್ವ ಅಭಿಮಾನಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ನಲ್ಲಿ ಟ್ರೋಫಿ ಗೆದ್ದ ಹಿನ್ನೆಲೆ ಎಲ್ಲೆಡೆ ಸಂಭ್ರಮ ಜೋರಾಗಿದೆ. ಇತ್ತ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಕೂಡ ಸಂಭ್ರಮ ಮುಗಿಲು ಮುಟ್ಟಿತ್ತು. ಈ ಸಂಭ್ರಮದಲ್ಲಿ ಭಾಗಿಯಾಗಿದ್ದ ಅಭಿಮಾನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಣಿಯುತ್ತಿದ್ದ ವೇಳೆ ಕುಸಿದುಬಿದ್ದು ಮಂಜುನಾಥ್ ಕುಂಬಾರ(25) ಸಾವನ್ನಪ್ಪಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.