Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದೇಶದ ಗಮನ ಸೆಳೆದ ರೇಣುಕಾಸ್ವಾಮಿ ಕೊಲೆ ಪ್ರಕರಣ: ರಾಷ್ಟ್ರೀಯ ಮಟ್ಟದ ‘ಟಾಪ್ ಸೆನ್ಸೇಷನಲ್ ಕೇಸ್‌’ಗಳಲ್ಲಿ 2ನೇ ಸ್ಥಾನ!

Spread the love

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಘಟನೆ ನಡೆದು ವರ್ಷಗಳೇ ಕಳೆದರೂ ಇದರ ಬಗ್ಗೆ ಇನ್ನೂ ಚರ್ಚೆಗಳು ನಡೆಯುತ್ತಿವೆ. ಈಗ ಈ ಪ್ರಕರಣವು ದೇಶದ ಎರಡನೇ ಪ್ರಮುಖ ಕೇಸ್ ಎಂದು ಅನಿಸಿಕೊಂಡಿದೆ. ಒಂದು ವರ್ಷದಲ್ಲಿ ಮೇಜರ್ ಕೇಸ್ ಅನಿಸಿಕೊಂಡ ಪ್ರಕರಣಗಳ ಪಟ್ಟಿ ರಿವೀಲ್ ಆಗಿದೆ. ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಕೇಸ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ದೇಶದ ಪ್ರಮುಖ ಕೇಸ್​ಗಳಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ 2ನೇ ಸ್ಥಾನ ಸಿಕ್ಕಿದೆ.

ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರ ಸೆಷನ್ ಕೋರ್ಟ್, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್​ನಲ್ಲಿ ಸುದ್ದಿ ಆಗಿತ್ತು. ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಈ ಕಾರಣದಿಂದಲೇ ದರ್ಶನ್ ಪ್ರಕರಣಕ್ಕೆ ತೂಕ ಬಂದಿದೆ. ಉಳಿದಂತೆ ಪುಣೆ ಪೋರ್ಷೆ ಕೇಸ್, ಹೈದರಾಬಾದ್ ಟೆಕ್ ಸ್ಕ್ಯಾಮ್, ಗಾಯಕ ಝುಬೇನ್ ಗರ್ಗ್ ಸಾವು ಪ್ರಮುಖ ಪ್ರಕರಣಗಳಾಗಿವೆ.


Spread the love
Share:

administrator

Leave a Reply

Your email address will not be published. Required fields are marked *