Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ್ಯ ರಾಜಧಾನಿಯಲ್ಲಿ ನದಿಯಂತೆ ರಸ್ತೆಗಳು: ಊಬರ್‌ನಿಂದ ‘ಟೈಟಾನಿಕ್’

Spread the love

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಳೆದ 2 ದಿನಗಳಲ್ಲಿ ಭಾರೀ ಮಳೆಯಾಗಿದ್ದು, ನಗರದ ರಸ್ತೆಗಳಲ್ಲಿ ನದಿಯಂತೆ ನೀರು ಹರಿಯುತ್ತಿದೆ. ಬೆಂಗಳೂರಿನ ಈ ಪರಿಸ್ಥಿತಿಯನ್ನು ಊಬರ್ ಕಂಪನಿ  ವ್ಯಂಗ್ಯ ಮಾಡಿದೆ.

ಹೌದು, ಬೆಂಗಳೂರಿಗೆ ಟೈಟಾನಿಕ್ ಬೋಟ್‌ನ ವ್ಯವಸ್ಥೆಯಿದೆ ಎನ್ನುವ ಫೋಟೋವನ್ನು ತನ್ನ ಇನ್‌ಸ್ಟಾಗ್ರಾಂ ಹಂಚಿಕೊಂಡಿದೆ. ಈ ರೀತಿಯಾಗಿ ಬೆಂಗಳೂರಿನ ತುಂಬೆಲ್ಲಾ ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವುದನ್ನು ಊಬರ್ ಕಂಪನಿಯು ಲೇವಡಿ ಮಾಡಿದೆ.

ಊಬರ್ ಸರ್ವಿಸ್ ಲಿಸ್ಟ್ನಲ್ಲಿ ಈ ಫೋಟೋ ಹಾಕಿದ್ದು, ಒಂದು ನಿಮಿಷದಲ್ಲಿ ವೇಗವಾಗಿ ಟೈಟಾನಿಕ್ ಬೋಟ್ ಸೇವೆ ಸಿಗಲಿದೆ. ಕೇವಲ 149 ರೂ. ಹಣಕ್ಕೆ ಈ ಸೇವೆ ಒದಗಿಸಲಾಗುವುದು ಎಂದು ಬೆಂಗಳೂರಿನ ಸ್ಥಿತಿಯನ್ನ ಆಡಿಕೊಂಡಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಕಳೆದ ಎರಡು ದಿನಗಳಲ್ಲಿ ಸುರಿದ ಮಳೆಯಿಂದ ಬೆಂಗಳೂರಿನ ಹಲವು ಪ್ರದೇಶಗಳು ಜಲಾವೃತವಾಗಿದ್ದವು. ಇನ್ನು ಕೆಲವು ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದರು. ಇದೀಗ ಬೆಂಗಳೂರಿನ ಈ ಸ್ಥಿತಿಯನ್ನು ಊಬರ್ ಕಂಪನಿ ಟ್ರೋಲ್ ಮಾಡಿದೆ.


Spread the love
Share:

administrator

Leave a Reply

Your email address will not be published. Required fields are marked *