Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆರ್‌ಟಿ ನಗರ ಹೋಟೆಲ್‌ನಲ್ಲಿ ಅಡುಗೆ ಭಟ್ಟನ ಮೇಲೆ ಮ್ಯಾನೇಜರ್ ಮಚ್ಚು ಹಲ್ಲೆ – ಪ್ರಕರಣ ದಾಖಲು

Spread the love

ಆರ್‌ಟಿ ನಗರದ ಹೋಟೆಲ್‌ನಲ್ಲಿ ಅಡುಗೆ ಭಟ್ಟನ ಮೇಲೆ ಮ್ಯಾನೇಜರ್ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ವೈಯಕ್ತಿಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದು, ಮಚ್ಚು ಬಳಸಿ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ. ಗಾಯಗೊಂಡ ಅಡುಗೆ ಭಟ್ಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಹಲ್ಲೆ ನಡೆಸಿದ ಮ್ಯಾನೇಜರ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಟನ್ ಕಡಿಯುವ ಮಚ್ಚಿನಿಂದ ಸಿಬ್ಬಂದಿ ಅಡುಗೆ ಭಟ್ಟನ ಗುರುಮೂರ್ತಿ ಮೇಲೆ ಮ್ಯಾನೇಜರ್ ಶಜಾದ್ ಅಲಿ ಹಲ್ಲೆ ಮಾಡಿರುವ ಆರೋಪ ಮಾಡಲಾಗಿದೆ. ಸದ್ಯ ಘಟನೆ ಬಗ್ಗೆ ಪೊಲೀಸರು (police) ಮಾಹಿತಿ ಪಡೆದುಕೊಂಡಿದ್ದಾರೆ. ಹುಡುಗಿ ವಿಚಾರಕ್ಕೆ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಆರ್​​ಟಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಆರ್​ಟಿ ನಗರ ಪೊಲೀಸರು ಭೇಟಿ ನೀಡಿದ್ದಾರೆ. ಹೋಟೆಲ್ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಮಾಡಿದ್ದಾರೆ. ಮಧ್ಯಾಹ್ನ 1.30 ರ ನಡುವೆ ಘಟನೆ ನಡೆದ್ದು, ಈ ವೇಳೆ ಮಾಂಸ ಕತ್ತರಿಸುವ ಮಚ್ಚು ತಂದು ಹಲ್ಲೆ ಮಾಡಲಾಗಿದೆ. ಗಾಯಾಳು ಗುರುಮೂರ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಹಲ್ಲೆ ಮಾಡಿದ ಶಜಾದ್ ಅಲಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆ ಕೆಲಸ ಮಾಡುತ್ತಿದ್ದ ಹೋಟೆಲ್​​ನಲ್ಲಿಯೂ ಸಿಬ್ಬಂದಿ ಜೊತೆ ಗಲಾಟೆ ಮಾಡಿಕೊಂಡು ಶಜಾದ್ ಗಲಾಟೆ ಕೆಲಸ ಕಳೆದುಕೊಂಡಿದ್ದ. ಸದ್ಯ ಇಬ್ಬರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *