Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕರ್ನಾಟಕದಲ್ಲಿ ಬಿರುಬಿಸಿಲು – ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Spread the love

ರಾಜ್ಯದಲ್ಲಿ ಬಿರು ಬಿಸಿಲಿಗೆ ಜನರು ಬಸವಳಿದಿದ್ದಾರೆ. ಸೂರ್ಯ ಜನರ ನೆತ್ತಿ ಸುಡುತ್ತಿದ್ದಾನೆ. ಅಬ್ಬಬ್ಬಾ ಎಂಥಾ ಸೆಕೆ ಅಂತ ಜನರು ಗೊಣಗುತ್ತಿದ್ದಾರೆ. ಬೇಸಿಗೆಯಲ್ಲಿ ತಾಪಕ್ಕೆ ತಂಪೆರೆಯಲು ವರುಣ ಕೂಡ ಬರ್ತಿದ್ದಾನೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆತಿಳಿಸಿದೆ. ಮಳೆಯಾಗಿ ಕಾಯ್ತಿರುವ ಜನರು ಆಕಾಶ ನೋಡ್ತಿದ್ದಾರೆ. 

4 ಜಿಲ್ಲೆಗಳಲ್ಲಿ ಮಳೆಯೋ ಮಳೆ ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆದ್ರೆ ಬೆಂಗಳೂರಿಗೆ ಬಿಸಿಲ ಕಾವು ಹೆಚ್ಚಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರಿಯಲಿದೆ.

6 ಜಿಲ್ಲೆಗಳಲ್ಲಿ ಮುಂದುವರಿಯಲಿದೆ ಒಣಹವೆ! ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ.


Spread the love
Share:

administrator

Leave a Reply

Your email address will not be published. Required fields are marked *