Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೂಲಧರ್ಮ ಮುಚ್ಚಿಟ್ಟ ಮಠಾಧೀಶ: ಗ್ರಾಮಸ್ಥರ ಆಕ್ಷೇಪದ ಬಳಿಕ ನಿಜಲಿಂಗ ಸ್ವಾಮೀಜಿ ಪೀಠತ್ಯಾಗ

Spread the love

ಚಾಮರಾಜನಗರ: ಲಿಂಗದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಮೂಲ ಧರ್ಮದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡದೇ ಹಾಗೂ ತಮ್ಮ ದಾಖಲಾತಿಗಳಲ್ಲಿ ತಮ್ಮ ಮೂಲಧರ್ಮದ ಹೆಸರನ್ನೇ ಉಳಿಸಿಕೊಂಡಿರುವುದು ಬಹಿರಂಗವಾಗಿದೆ. ತಮ್ಮ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಚೌಡಹಳ್ಳಿ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಂತೆ ಸ್ವಾಮೀಜಿ ಪೀಠತ್ಯಾಗ ಮಾಡಿ ಮಠದಿಂದ ಹೊರ ನಡೆದಿದ್ದಾರೆ.

ಯಾದಗಿರಿ ಜಿಲ್ಲೆ ಶಹಪುರ ಮೂಲದ ನಿಜಲಿಂಗ ಸ್ವಾಮೀಜಿ ಪೂರ್ವಾಶ್ರಮದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದರು. ಪೂರ್ವಾಶ್ರಮದಲ್ಲಿ ಇವರ ಹೆಸರು ಮಹಮದ್ ನಿಸಾರ್‌ ಎಂದು ಇತ್ತು. ಮಹಮದ್ ನಿಸಾರ್‌ ಅವರು ವಿಶ್ವಗುರು ಬಸವಣ್ಣನವರ ತತ್ವ ಚಿಂತನೆಗಳಿಂದ ಪ್ರಭಾವಿತರಾಗಿ ಕಳೆದ ವರ್ಷ ಬಸವಕಲ್ಯಾಣದ ಬಸವಪ್ರಭು ಸ್ವಾಮೀಜಿಯಿಂದ ಜಂಗಮ ದೀಕ್ಷೆ ಪಡೆದಿದ್ದರು. ಲಿಂಗದೀಕ್ಷೆ ಪಡೆದ ಬಳಿಕ ಮಹಮದ್ ನಿಸಾರ್‌ ಅವರಿಗೆ ನಿಜಲಿಂಗ ಸ್ವಾಮೀಜಿ ಅಂತ ಮರುನಾಮಕರಣ ಮಾಡಲಾಗಿತ್ತು.

ಬಸವ ತತ್ವ ಪ್ರಚಾರಕರಾಗಿದ್ದ ನಿಜಲಿಂಗ ಸ್ವಾಮೀಜಿ ಅವರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಚೌಡಹಳ್ಳಿ ಗ್ರಾಮದಲ್ಲಿನ ಗುರುಮಲ್ಲೇಶ್ವರ ಶಾಖಾಮಠಕ್ಕೆ ಪೀಠಾಧಿಪತಿ ಮಾಡಲಾಗಿತ್ತು. ಶಾಖಾಮಠ ಮಠದ ನೂತನ ಕಟ್ಟಡ ಕಟ್ಟಿಸಿದ್ದ ಮಹದೇವ ಪ್ರಸಾದ್ ಎಂಬುವರು ಒಂದುವರೆ ತಿಂಗಳ ಹಿಂದೆ ಸ್ವಾಮೀಜಿಯೊಬ್ಬರ ಶಿಫಾರಿಸ್ಸಿನ ಮೇರೆಗೆ ನಿಜಲಿಂಗ ಸ್ವಾಮೀಜಿ ಅವರನ್ನು ಕರೆತಂದು ಮಠಾಧೀಶರನ್ನಾಗಿ ಮಾಡಿದ್ದರು.

ಕಳೆದ ಒಂದುವರೆ ತಿಂಗಳಿಂದ ಚೌಡಹಳ್ಳಿಯ ಗುರುಮಲ್ಲೇಶ್ವರ ಮಠದಲ್ಲಿ ಪ್ರವಚನ ಧಾರ್ಮಿಕ ಕಾರ್ಯ ನಡೆಸಿಕೊಂಡು ಬರುತ್ತಿದ್ದರು. ನಿಜಲಿಂಗ ಸ್ವಾಮೀಜಿ ತಾವು ಮ‌ೂಲತಃ ಮುಸ್ಲಿಂ ಧರ್ಮದ ವ್ಯಕ್ತಿ ಎಂಬುದನ್ನು ಗ್ರಾಮಸ್ಥರಿಗೆ ತಿಳಿಸಿರಲಿಲ್ಲ. ಆದರೆ, ಮಠದ ಭಕ್ತರೊಬ್ಬರಿಗೆ ತಮ್ಮ ಮೊಬೈಲ್ ನೀಡಿದ್ದ ಸಂದರ್ಭದಲ್ಲಿ ಸತ್ಯ ಬಯಲಾಗಿತ್ತು.

ಭಕ್ತ ಸ್ವಾಮೀಜಿಯ ಮೊಬೈಲ್​ನಲ್ಲಿನ ಎಸ್​ಎಸ್​ಎಲ್​ಸಿ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್‌ ನೋಡಿದಾಗ, ಅದರಲ್ಲಿ ನಿಸಾರ್ ಮಹಮದ್ ಎಂದು ಇತ್ತು. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ವಾಮೀಜಿಯ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೂಲತಃ ಮುಸ್ಲಿಂ ಧರ್ಮಕ್ಕೆ ಸೇರಿದವರು ಎಂಬುವುದನ್ನು ಮುಚ್ಚಿಟ್ಟಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನಾನು ಅನ್ಯ ಧರ್ಮದವನಾದರೂ ಬಸವತತ್ವ ದಿಂದ ಆಕರ್ಷಿತನಾಗಿ ಜಂಗಮ ದೀಕ್ಷೆ ಪಡೆದಿದ್ದೇನೆ ಎಂದು ನಿಜಲಿಂಗ ಸ್ವಾಮೀಜಿ ಹೇಳಿದರು. ಆದರೆ, ತಾವು ಮುಸ್ಲಿಂ ಧರ್ಮದಿಂದ ಮತಾಂತರವಾಗಿರುವ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದ ಬಗ್ಗೆ ಗ್ರಾಮಸ್ಥರು ಅಸಮಧಾನ ವ್ಯಕ್ತಪಡಿಸಿದರು. ಬಳಿಕ ಗುಂಡ್ಲುಪೇಟೆ ಪೊಲೀಸರ ಮದ್ಯಸ್ಥಿಕೆಯಲ್ಲಿ ಸಭೆ ನಡೆಯಿತು. “ಗ್ರಾಮಸ್ಥರಿಗೆ ಇಷ್ಟವಿಲ್ಲದಿದ್ದರೆ ತಾವು ಪೀಠದಲ್ಲಿ ಮುಂದುವರಿಯುವುದಿಲ್ಲ ಪೀಠತ್ಯಾಗ ಮಾಡುತ್ತೇನೆ ಎಂದು ನಿಜಲಿಂಗ ಸ್ವಾಮೀಜಿ ಯಾದಗಿರಿಗೆ ವಾಪಸ್ ತೆರಳಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *