Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂದೂಗಳ ಸರಣಿ ಹತ್ಯೆ: ಒಂದೇ ತಿಂಗಳಲ್ಲಿ ಮೂವರ ಬಲಿ; ವಿಶ್ವದಾದ್ಯಂತ ತೀವ್ರ ಆಕ್ರೋಶ!

Spread the love

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಮತ್ತೊಬ್ಬ ಹಿಂದೂ ವ್ಯಕ್ತಿ (Hindu Man) ಬಜೇಂದ್ರ ಬಿಸ್ವಾಸ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ತಿಂಗಳಲ್ಲಿ ನಡೆದ ಹಿಂದೂಗಳ ಮೂರನೇ ಹತ್ಯೆ ಇದಾಗಿದೆ.

ಸುಳ್ಳು ಧರ್ಮನಿಂದನೆಯ ಆರೋಪದ ಮೇಲೆ ಕಾರ್ಖಾನೆಯ ಕೆಲಸಗಾರ ದೀಪು ಚಂದ್ರ ದಾಸ್‌ರನ್ನು ಗುಂಪು ಹಲ್ಲೆ ನಡೆಸಿ ಹತ್ಯೆ ಮಾಡಿತ್ತು. ಇದರ ಬೆನ್ನಲ್ಲೇ, ಭಾಲುಕಾ ಉಪಜಿಲ್ಲಾದಲ್ಲಿ ಗಾರ್ಮೆಂಟ್ ಕಾರ್ಖಾನೆಯಲ್ಲಿ ಕರ್ತವ್ಯದಲ್ಲಿದ್ದಾಗ ಬಿಸ್ವಾಸ್ (40) ಅವರನ್ನು ಸಹೋದ್ಯೋಗಿಯೊಬ್ಬ ಕೊಂದಿದ್ದಾನೆ.

ಉಪಜಿಲ್ಲಾದ ಮೆಹ್ರಾಬರಿ ಪ್ರದೇಶದಲ್ಲಿರುವ ಸುಲ್ತಾನ ಸ್ವೆಟರ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಗುಂಡಿನ ದಾಳಿ ನಡೆದಿದೆ. ಬಿಸ್ವಾಸ್ ಬಾಂಗ್ಲಾದೇಶದ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಅರೆಸೈನಿಕ ಸಹಾಯಕ ಪಡೆಯಾದ ಅನ್ಸರ್ ಬಹಿನಿಯ ಸದಸ್ಯರಾಗಿದ್ದರು. ಇದು ದೇಶದಲ್ಲಿ ಆಂತರಿಕ ಭದ್ರತೆ ಮತ್ತು ಕಾನೂನು ಜಾರಿ ಜವಾಬ್ದಾರಿಯನ್ನು ಹೊಂದಿದೆ.

ಕೊಲೆ ಮಾಡಿದ ಅನ್ಸಾರ್ ಸದಸ್ಯ ನೋಮನ್ ಮಿಯಾನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಅನ್ಸಾರ್ ಸದಸ್ಯರಾದ ನೋಮನ್ ಮತ್ತು ಬಿಸ್ವಾಸ್ ಒಟ್ಟಿಗೆ ಕುಳಿತಿದ್ದರು. ನೋಮನ್ ತನ್ನ ಬಂದೂಕಿನಿಂದ ಗುಂಡು ಹಾರಿಸಿದ್ದು, ಬಿಸ್ವಾಸ್ ಎಡ ತೊಡೆಯಲ್ಲಿ ತೀವ್ರವಾಗಿ ಗಾಯವಾಗಿತ್ತು. ಸಹೋದ್ಯೋಗಿಗಳು ಹಿಂದೂ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದರು. ಅಷ್ಟರಲ್ಲಾಗಲೇ ಬಿಸ್ವಾಸ್‌ ಮೃತಪಟ್ಟಿದ್ದಾರೆ.

ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಹಿಂದೂಗಳ ಮೂರನೇ ಹತ್ಯೆ ಇದಾಗಿದೆ. ಡಿಸೆಂಬರ್ 24 ರಂದು, ಬಾಂಗ್ಲಾದೇಶದ ಕಲಿಮೋಹರ್ ಒಕ್ಕೂಟದ ಹೊಸೈನ್‌ಡಂಗಾ ಪ್ರದೇಶದಲ್ಲಿ 29 ವರ್ಷದ ಅಮೃತ್ ಮಂಡಲ್ ಎಂಬ ಹಿಂದೂ ಯುವಕನನ್ನು ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿತ್ತು. ಡಿಸೆಂಬರ್ 18 ರಂದು ಮೈಮೆನ್ಸಿಂಗ್‌ನ ಭಾಲುಕಾ ಉಪಜಿಲ್ಲಾದಲ್ಲಿರುವ ಕಾರ್ಖಾನೆಯಲ್ಲಿ ಸುಳ್ಳು ಧರ್ಮನಿಂದೆಯ ಆರೋಪದ ಮೇಲೆ 25 ವರ್ಷದ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರನ್ನು ಗುಂಪು ಹಲ್ಲೆ ನಡೆಸಿ ಕ್ರೂರವಾಗಿ ಹತ್ಯೆ ಮಾಡಲಾಯಿತು. ದಾಸ್‌ ಮೃತದೇಹವನ್ನು ಮರಕ್ಕೆ ನೇಣು ಹಾಕಲಾಗಿತ್ತು. 

ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ಅಡಿಯಲ್ಲಿ ಬಾಂಗ್ಲಾದೇಶವು ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಇದು ಪ್ರಪಂಚದಾದ್ಯಂತ ಜನರು ಮತ್ತು ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಕಳೆದ ವಾರ ಭಾರತವು ಬಾಂಗ್ಲಾದೇಶದಲ್ಲಿ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಬೌದ್ಧರು ಸೇರಿದಂತೆ ಅಲ್ಪಸಂಖ್ಯಾತರ ವಿರುದ್ಧ ನಿರಂತರ ದ್ವೇಷದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು.


Spread the love
Share:

administrator

Leave a Reply

Your email address will not be published. Required fields are marked *