ಶಿವಸೇನೆ ಕಾರ್ಯಕರ್ತರು ಕರ್ನಾಟಕ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಕೇಸರಿ ಬಳಿದಿದ್ದಾರೆ.

ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ದಿನದಿಂದ ದಿನಕ್ಕೆ ಕನ್ನಡಿಗರ ಮೇಲೆ ದೌರ್ಜನ್ಯ ಹೆಚ್ಚಳವಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಮಧ್ಯಪ್ರವೇಶ ಮಾಡದೆ ಇರುವುದಕ್ಕೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ನಡುವೆ ಮಹಾರಾಷ್ಟ್ರದಲ್ಲಿ ಸರ್ಕಾರಿ ಬಸ್ಗಳ ಡ್ರೈವರ್ಗಳ ಮೇಲೆ ದೌರ್ಜನ್ಯ ನಡೆಸುವುದು ಮುಂದುವರಿದಿದ್ದು ಭಾರೀ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಕರ್ನಾಟಕದ ಬಸ್ ಡ್ರೈವರ್ಗಳ ಮೇಲೆ ದೌರ್ಜನ್ಯ ಮುಂದುವರಿದಿರುವುದು ಭಾರೀ ವಿರೋಧಕ್ಕೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಈ ವಿಚಾರದಲ್ಲಿ ಯಾವುದೇ ಮುಂದಡಿಯನ್ನು ಇರಿಸದೆ ಇರುವುದು ಸಹ ಭಾರೀ ಆಕ್ರೋಶಕ್ಕೆ ಕಾರಣವಾಗುತ್ತಿದೆ.

ಕರ್ನಾಟಕದ ಬೆಳಗಾವಿಯಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವೆ ಗಡಿವಿವಾದ ಮೊದಲಿನಿಂದಲೂ ಇದೆ. ಆದರೆ, ಇದೀಗ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಭಾಷಾ ವಿವಾದ ಸೃಷ್ಟಿಯಾಗಿದೆ. ಕರ್ನಾಟಕದ ಬಸ್ ಕಂಡಕ್ಟರ್ನ ಮೇಲೆ ಮರಾಠಿ ಪುಂಡರು ಹಲ್ಲೆ ಮಾಡಿರುವ ವಿಷಯ ತಣ್ಣಗಾಗುತ್ತಿಲ್ಲ. ಅಲ್ಲದೆ ಈ ಬೆಳವಣಿಗೆ ಬೆನ್ನಲ್ಲೇ ಕನ್ನಡಿಗರು ಮಹಾರಾಷ್ಟ್ರದ ಬಸ್ಗಳಿಗೆ ಮಸಿ ಬಳಿಯುವುದು ಹಾಗೂ ಕಂಡಕ್ಟರ್ಗೆ ಮಸಿ ಬಳಿದಿದ್ದಾರೆ ಎನ್ನಲಾದ ವಿಡಿಯೋಗಳು ಸಹ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಕನ್ನಡಿಗ ಬಸ್ ಡ್ರೈವರ್ಗಳಿಗೆ ಸಂಕಷ್ಟ ಎದುರಾಗಿದೆ.
ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಸೃಷ್ಟಿಯಾಗಿರುವ ಸಮಸ್ಯೆ ಸದ್ಯಕ್ಕೆ ಕಡಿಮೆಯಾಗುವ ಯಾವುದೇ ಲಕ್ಷಣಗಳು ಸಹ ಕಾಣಿಸುತ್ತಿಲ್ಲ.
ಮಹಾರಾಷ್ಟ್ರ ಸರ್ಕಾರವು ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸರ್ಕಾರಿ ಬಸ್ಗಳ ಸಂಚಾರವನ್ನು ಸ್ಥಗಿತ ಮಾಡಿದೆ. ಆದರೆ, ಕರ್ನಾಟಕದ ಬಸ್ ಸಂಚಾರ ಮುಂದುವರಿದಿದೆ. ಇದರಿಂದ ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಸಂಕಷ್ಟ ಎದುರಾಗಿದೆ.
ಸೋಮವಾರ ಕರ್ನಾಟಕದ ಬಸ್ಗಳ ಕಂಡಕ್ಟರ್ ಹಾಗೂ ಬಸ್ ಡ್ರೈವರ್ಗಳನ್ನು ನಡೆಸಿಕೊಂಡಿರುವ ವಿಧಾನಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಸೋಮವಾರ ನಡೆದಿದೆ ಎನ್ನಲಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.