Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮದುವೆ ವೇಳೆ ಶಾಕ್: ‘ನನಗೆ ಮದುವೆ ಬೇಡ’ ಎಂದ ವಧು, ತಾಳಿ ಕೈಯಲ್ಲೇ ಉಳಿಸಿಕೊಂಡ ವರ!

Spread the love

ಹಾಸನ: ತಾಳಿ ಕಟ್ಟುವ ವೇಳೆ ವಧು (bride) ತಲೆ ಅಲ್ಲಾಡಿಸಿ ನನಗೆ ಈ ಮದುವೆ (marriage ) ಬೇಡ ಎಂದ ಘಟನೆ ಹಾಸನದ (Hassan) ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ತಾಳಿ ಕಟ್ಟೋ ಮುಹೂರ್ತಕ್ಕೂ ಮುನ್ನ ಯುವತಿಗೆ ಒಂದು ಫೋನ್ ಕರೆ ಬಂದಿದೆ. ಆಗ ವಧು ತಕ್ಷಣವೇ ನನಗೆ ಈ ಮದುವೆ ಬೇಡ ಎಂದು ವಧು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ

ಹೆತ್ತವರು, ಸಂಬಂಧಿಕರು ಯಾರು ಏನೇ ಹೇಳಿದರು ಕೇಳದ ವಧು ರೂಂಗೆ ಹೋಗಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾರೆ. ತಾಳಿ ಕೈಯಲ್ಲಿ ಹಿಡಿದು ಮಧು ಮಗ ಮಾಡಿದ ಮನವೊಲಿಕೆಗೂ ಆಕೆ ಮನಸ್ಸು ಕರಗಲಿಲ್ಲ. ವಧು ಮದುವೆ ಬೇಡ ಎಂದಾಗ ಕೈಯಲ್ಲಿ ತಾಳಿ ಹಿಡಿದಿದ್ದ ವರ ಯಾಕೆ ಮದುವೆ ಬೇಡ ಎಂದು ಕೇಳಿದ್ದಾನೆ. ಕೊನೆಗೆ ಹಠ ಹಿಡಿದ ಬೆನ್ನಲ್ಲೇ ವರ ಕೂಡ ನನಗೂ ಮದುವೆ ಬೇಡ ಎನ್ನುತ್ತಾ ಕಣ್ಣೀರು ಹಾಕಿದ್ದಾನೆ. ಮಗಳು ಮದುವೆ ಬೇಡ ಎಂದಿದ್ದಕ್ಕೆ ಪೋಷಕರು ಸಹ ಕಣ್ಣೀರಿಟ್ಟಿದ್ದಾರೆ. ಇದರೊಂದಿಗೆ ಧಾರಾಮುಹೂರ್ತದ ಸಮಯದಲ್ಲಿ ಬಂದ ಅದೊಂದು ಫೋನ್ ಕರೆ ಮದುವೆಯನ್ನೇ ಮುರಿದು ಹಾಕಿದೆ.

ಮೂರು ತಿಂಗಳ ಹಿಂದೆ ನಿಶ್ಚಯವಾಗಿ ಇಂದು ಮುಹೂರ್ತ ನಡೆಸೋ ವೇಳೆಯಲ್ಲಿ ಮಧು ಮಗಳು ಮಾಡಿದ ಅವಾಂತರ ಪೋಷಕರಿಗೆ ಆಘಾತ ತಂದರೆ ಮದುವೆಗೆ ಬಂದವರು ಕಂಗೆಟ್ಟು ಹೋಗಿದ್ದಾರೆ. ಗದ್ದಲ ಗಲಾಟೆ ನಡುವೆ ಮದುವೆಯೇ ನಿಂತು ಹೋಗಿದೆ. ಇನ್ನು ಪೊಲೀಸರ ಮಧ್ಯಸ್ಥಿತಿಕೆಯಲ್ಲಿ ರಾಜಿ ಸಂಧಾನ ನಡೆದಿದ್ದು, ಪ್ರೀತಿಸಿದವನಿಗಾಗಿ ಕೊನೆಗಳಿಗೆಯಲ್ಲಿ ಮದುವೆ ಮುರಿದ ಯುವತಿ ವಿರುದ್ಧ ವರನ ಕಡೆಯವರು ಅಸಮಧಾನ ಹೊರ ಹಾಕಿದ್ದಾರೆ.

ಹಾಸನ ಹೊರವಲಯ ಬೂವನಹಳ್ಲಿಯ ಯುವತಿ ಆಲೂರು ತಾಲ್ಲೂಕಿನ ಸರ್ಕಾರಿ ಶಾಲೆ ಶಿಕ್ಷಕನ ನಡುವೆ ಮೂರು ತಿಂಗಳ ಹಿಂದೆ ನಿಶ್ಚಯವಾಗಿದ್ದ ಮದುವೆ, ಇಂದು ಧಾರ ಮುಹೂರ್ತ ನಿಗದಿಯಾಗಿತ್ತು, ಬೆಳೀಗ್ಗೆ 9 ಗಂಟೆಗೆ ತಾಳಿಕಟ್ಟೋ ಸಲುವಾಗಿ ಎಲ್ಲಾ ಶಾಸ್ತ್ರಗಳು ನೆರವೇರಿಯಾಗಿತ್ತು, ಮುತ್ತೈದೆಯರು ಕೈನೀರು ಬಿಟ್ಟು ಹರಸಿ ಅರ್ಚಕರು ಮಂತ್ರ ಹೇಳಿ ಮಂಗಳವಾದ್ಯಗಳು ಮೊಳಗಿ ತಾಳಿಕಟ್ಟಲು ವರ ತಾಳಿ ಕೈಗೆತ್ತಿಕೊಳ್ಳುತ್ತಲೆ ವಧು ತಲೆ ಅಲ್ಲಾಡಿಸಿ ಕಣ್ಣೀರಿಡೋಕೆ ಶುರುಮಾಡಿದ್ದಾಳೆ. ಏನಾಯ್ತು ಎಂದು ಕೇಳಿದ್ರು ಹೇಳದ ಆಕೆ ಹಸೆಮಣೆಯಿಂದ ಎದ್ದು ರೂಮ್ಗೆ ಓಡಿಹೋಗಿದ್ದಾಳೆ.

ಪ್ರಿತಿಯ ರಹಸ್ಯ ಬಯಲಿಗೆ

ತಾಳಿ ಕೈಯಲ್ಲೇ ಹಿಡಿದು ಪರಿಪರಿಯಾಗಿ ಕೇಳಿದ ವರ ಏನಾಯ್ತು ಎಂದು ಕೇಳಿದಾಗಲೇ ಬಯಲಾಗಿದ್ದು ಅದೊಂದು ಪ್ರಿತಿಯ ರಹಸ್ಯ, ಸ್ನಾತಕೋತ್ತರ ಪದವಿ ಮುಗಿಸಿರುವ ಯುವತಿಗೆ ಮತ್ಯಾರೋ ಯುವಕನ ಜೊತೆ ಲವ್ ಇತ್ತಂತೆ, ಇದನ್ನ ಮುಚ್ಚಿಟ್ಟಿದ್ದ ಆಕೆ ಮನೆಯವರ ಒತ್ತಾಯಕ್ಕೆ ಮಣಿದು ಶಿಕ್ಷಕನ ಜೊತೆಗೆ ಮದುವೆ ನಿಶ್ಚಯ ಮಾಡಿಕೊಂಡಿದ್ದಾಳೆ, ಆದ್ರೆ ,ಮುಹೂರ್ತದ ಸಮಯದಲ್ಲಿ ಬಂದ ಅದೊಂದು ಕರೆಯಿಂದ ಮದುವೆಯನ್ನ ಮುರಿದುಬಿದ್ದಿದೆ.

ಆಲೂರು ತಾಲ್ಲೂಕಿನ ಸರ್ಕಾರಿ ಶಾಲೆಯ ಶಿಕ್ಷಕನ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದಾರೆ. ತಿಂಗಳ ಹಿಂದೆ ಅದ್ದೂರಿಯಾಗಿ ಪ್ರಿವೆಡ್ಡಿಂಗ್ ಶೂಟ್ ಸಹ ಮಾಡಿಸಿಕೊಂಡು ಒಟ್ಟೊಟ್ಟಿಗೆ ಓಡಾಡಿದ ನವ ಜೋಡಿ ನಿನ್ನೆ ಸಂಜೆಯೇ ಕಲ್ಯಾಣ ಮಂಟಪಕ್ಕೆ ಬಂದಿದ್ದರು. ಎಲ್ಲವೂ ಚನ್ನಾಗಿಯೇ ನಡೆದಿತ್ತು. ಬೆಳಿಗ್ಗೆ ಎದ್ದು ಮದುವೆ ಉಡುಗೆ ತೊಟ್ಟು ಎಲ್ಲಾ ಶಾಸ್ತ್ರಗಳನ್ನು ಪೂರೈಸಿಕೊಂಡಾಕೆ ಕೊನೆಗಳಿಗೆಯಲ್ಲಿ ಮದುವೆ ಮುರಿದು ಹಸೆಮಣೆಯಿಂದ ಎದ್ದು ಹೋಗಿದ್ದಾಳೆ.

ಪೊಲೀಸರಿಂದ ರಾಜೀ ಸಂಧಾನ

ಕೊನೆಗೆ ಈ ವಿಚಾರ ಹಾಸನ ಬಡಾವಣೆ ಠಾಣೆ ಪೊಲೀಸರಿಗೆ ಮುಟ್ಟಿಸಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಎರಡು ಕಡೆಯವರನ್ನ ಮಾತನಾಡಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಅತ್ತ ಹುಡುಗಿ ಮನೆಯವರು ಯುವಕನ ಮನೆಯವರ ವಾಗ್ವಾದ ನಡೆದಿದೆ. ಎಲ್ಲಾ ಶಾಸ್ತ್ರ ಸಂಪ್ರದಾಯವನ್ನು ಖುಷಿ ಖುಷಿಯಾಗಿ ಮಾಡಿಸಿಕೊಂಡ ಹುಡುಗಿಯನಡೆ ಅಲ್ಲಿದ್ದವರೆಲ್ಲರ ಅಚ್ಚರಿಗೆ ಕಾರಣವಾದ್ರೆ ಎರಡುಕಡೆಯವರನ್ನ ಸಮಾಧಾನಪಡಿಸಲು ಪೊಲೀಸರು ಹೈರಾಣಾಗಿದ್ದಾರೆ. ಕೊನೆಗೆ ಮದುವೆ ಮುರಿದುಬಿದ್ದಿದ್ದು, ಮದುವೆ ಬಂದವರಿಗೆಲ್ಲ ಮಾಡಿಸಲಾಗಿದ್ದ ಬಗೆ ಬಗೆಯ ಊಟ ವೇಸ್ಟ್ ಆಗಿದೆ.

ಒಟ್ಟಿನಲ್ಲಿ ಹೆತ್ತವರು ಹೇಳಿದ ಹುಡುಗನನ್ನ ಇಷ್ಟಪಟ್ಟು ಮದುವೆಗೆ ಓಕೆ ಎಂದಿದ್ದ ಹುಡುಗಿ ದಿಢೀರ್ ಪ್ರೀತಿ ಪ್ರೇಮದ ನೆಪಹೇಳಿ ಮದುವೆಯನ್ನೇ ಮುರಿದಿದ್ದಾಳೆ, ಹೊಸ ಜೀವನದ ಕನಸು ಕಂಡು ಹಸೆಮಣೆ ಏರಿದ್ದ ಹುಡುಗ ಅತ್ತ ಮದುವೆಯೂ ಆಗದೆ ಇತ್ತ ಲಕ್ಷ ಲಕ್ಷ ಹಣವನ್ನು ಕಳೆದುಳ್ಳುವಂತಾಗಿದೆ


Spread the love
Share:

administrator

Leave a Reply

Your email address will not be published. Required fields are marked *