ಸ್ಮಾರ್ಟ್ ಮೀಟರ್ ಟೆಂಡರ್ ವಿವಾದ: ತನಿಖೆ ಸಾಧ್ಯ – ಜಾರ್ಜ್

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಟೆಂಡರ್ನಲ್ಲಿ ಯಾವುದೇ ಅಕ್ರಮ ಇಲ್ಲ. ಆದರೆ, ಕೆಟಿಪಿಪಿ ನಿಯಮ ಉಲ್ಲಂಘನೆಯು ಸಾಬೀತಾದರೆ ತನಿಖೆಗೆ ಆದೇಶ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ರಾಜ್ಯವು ಆರ್ಡಿಎಸ್ಎಸ್ ಯೋಜನೆ ಅಳವಡಿಸಿಕೊಳ್ಳದ ಕಾರಣ, ಬೇರೆ ರಾಜ್ಯಗಳಿಗಿಂತ ಸ್ಮಾರ್ಟ್ ಮೀಟರ್ ದರ ಹೆಚ್ಚಾಗಿದೆ. ಎಸ್ಕಾಂಗಳಿಗೆ ಸರ್ಕಾರ ₹10,000 ಕೋಟಿ ಬಾಕಿ ಉಳಿಸಿಕೊಂಡಿರುವ ಕಾರಣ ಈ ಯೋಜನೆಗೆ ಸೇರ್ಪಡೆಯಾಗಿಲ್ಲ. ಇದರಿಂದ ಗ್ರಾಹಕರು ಪೂರ್ಣ ಹಣ ಪಾವತಿಸಿ ಮೀಟರ್ ಖರೀದಿಸಬೇಕಾಗಿದೆ.