Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಮಾಜ ಸೇವಕ ನಿಶಾದ್ ಅಹ್ಮದ್‌ ಹೃದಯಾಘಾತಕ್ಕೆ ಬಲಿ:ಹಾಸನ ಜಿಲ್ಲೆಯಲ್ಲಿ ಸಾವುಗಳ ಸಾಲು

Spread the love

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈವರಗೆ 11 ಮಂದಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಈ ಸಾವಿನ ಸರಣಿ ಆತಂಕಕ್ಕೆ ಕಾರಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದ ನಿಶಾದ್ (35) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅನಾಥ ಶವಗಳ ಅಂತ್ಯಕ್ರಿಯೆ ಮಾಡಿ ಹೃದಯವೈಶಾಲ್ಯತೆ ಮೆರೆದಿದ್ದ ನಿಶಾದ್ ಅಹ್ಮದ್ ಸಮಾಜ ಸೇವಕರಾಗಿದ್ದು, ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಅನಾಥ ಶವಗಳ ಅಂತ್ಯಕ್ರಿಯೆ ಮಾಡಿ ಹೃದಯವೈಶಾಲ್ಯತೆ ಮೆರೆದಿದ್ದರು. ಅಂಥಾ ಯವಕನೇ ಈಗ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದ ನಿಶಾದ್​ ಕುಟುಂಬಕ್ಕೆ ಆಧಾರವಾಗಿದ್ದ.ಶನಿವಾರ ರಾತ್ರಿ ಅವರಿಗೆ ವಾಂತಿಯಾಗಿದೆ. ಕೂಡಲೇ ಹಾಸನದ ಆಸ್ಪತ್ರೆಗೆ ಹೋಗಿ ಬಂದಿದ್ದರು. ಬಳಿಕ ಮನೆಯಲ್ಲಿ ಮಾತ್ರೆ ನುಂಗಿ ಮಲಗಿದ್ದ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.


ಹಾಸನ ಜಿಲ್ಲೆಯಲ್ಲಿ ಸಾಲು ಸಾಲು ಯುವಕರು ಹಾಗೂ ಮಧ್ಯ ವಯಸ್ಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕ ಹೆಚ್ಚಿಸಿದೆ. ಒಂದು ತಿಂಗಳಲ್ಲಿ 12 ಜನ ಯುವಕರು, ಮಧ್ಯ ವಯಸ್ಕರು ಹೃದಯಾಘಾತದಿಂದ ಬಲಿಯಾಗಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *