Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

65 ಎಕರೆ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ತೆರವುಗೊಳಿಸಿದ ಯೋಧರು.

Spread the love

ಅಗರ್ತಲ: ತ್ರಿಪುರದ (Tripura) ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ 65 ಎಕರೆಯಲ್ಲಿ ಬೆಳೆಸಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ಭದ್ರತಾ ಪಡೆಗಳು (Security Forces) ನಾಶಪಡಿಸಿವೆ.

ಕಮಲಾನಗರ, ಕೃಷ್ಣಡೋಲಾ, ದುಲುಂಗಾ ಮತ್ತು ಬಿಜೋಯ್ ನಗರಗಳ ಅರಣ್ಯ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ದಾಳಿ ನಡೆಸಿವೆ. ಈ ವೇಳೆ 1.80 ಲಕ್ಷ ಪ್ರೌಢ ವ್ಯವಸ್ಥೆ ಗಾಂಜಾ ಸಸಿಗಳು ಪತ್ತೆಯಾಗಿದ್ದು ಅವುಗಳನ್ನು ನಾಶಪಡಿಸಲಾಗಿದೆ. ನಾಶಪಡಿಸಲಾದ ಗಾಂಜಾದ ಮೌಲ್ಯ 27 ಕೋಟಿ ರೂ. ಮೌಲ್ಯದ್ದು ಎಂದು ಅಂದಾಜಿಸಲಾಗಿದೆ

ಜನವರಿ 29 (ಗುರುವಾರ) ರಂದು ತ್ರಿಪುರದಲ್ಲಿ ಭದ್ರತಾ ಪಡೆಗಳು ಈ ಕಾರ್ಯಾಚರಣೆಯನ್ನು ನಡೆಸಿವೆ. ನಿಖರ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಮಲನಗರ, ಕೃಷ್ಣಡೋಲ, ದುಲುಂಗ ಮತ್ತು ಬಿಜೋಯ್ ನಗರಗಳಲ್ಲಿನ ಅರಣ್ಯ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಇತ್ತೀಚೆಗೆ ಮಾದಕ ವಸ್ತುಗಳ ವಿರುದ್ಧ ರಾಜ್ಯದಲ್ಲಿ ಕಾರ್ಯಾಚರಣೆ ತೀವ್ರಗೊಳಿಸಲಾಗುತ್ತಿದೆ.

ದಾಳಿಯಲ್ಲಿ ಸೋನಮುರಾ ಪೊಲೀಸ್ ಠಾಣೆಯ ಘಟಕಗಳಾದ 81 ಬೆಟಾಲಿಯನ್ ಬಿಎಸ್‌ಎಫ್, 5ನೇ, 9ನೇ, 11ನೇ ಮತ್ತು 14ನೇ ಬೆಟಾಲಿಯನ್ ಟಿಎಸ್‌ಆರ್, 14ನೇ ಬೆಟಾಲಿಯನ್ ಮಹಿಳಾ ಟಿಎಸ್‌ಆರ್, 35 ಬೆಟಾಲಿಯನ್ ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿ ಭಾಗಿಯಾಗಿದ್ದರು


Spread the love
Share:

administrator

Leave a Reply

Your email address will not be published. Required fields are marked *